‌ಹೊನ್ನೇತಾಳು ಸೊಸೈಟಿ ಅಧ್ಯಕ್ಷ ರವೀಶ್‌ ವಿರುದ್ದ ಅವಿಶ್ವಾಸ ನಿರ್ಣಯ

11ರಲ್ಲಿ 9 ಸದಸ್ಯರಿಂದ ವಿರುದ್ದ ಮತ ಚಲಾವಣೆ
ಬಿಜೆಪಿ ಕೈ ತಪ್ಪಿದ ಮತ್ತೊಂದು ಸೊಸೈಟಿ

ಹೊನ್ನೇತಾಳು ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ರವೀಶ್‌ ವಿರುದ್ದ ಇಂದು ಬೆಳಿಗ್ಗೆ ನಿರ್ದೇಶಕರು ಅವಿಶ್ವಾಸ ನಿರ್ಣಯ ಮಂಡಿಸಿದ್ದಾರೆ ಎಂದು ತಿಳಿದು ಬಂದಿದೆ. ಒಟ್ಟು 11 ಸದಸ್ಯರಲ್ಲಿ ಒಟ್ಟು 9 ಮಂದಿ ಅವರ ವಿರುದ್ದ ಮತ ಚಲಾಯಿಸಿದ್ದರಿಂದ ಬಹುತೇಕ ರವೀಶ್‌ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವುದು ಖಚಿತವಾಗಿದೆ. ಈ ಹಠಾತ್‌ ಬೆಳವಣಿಗೆಗೆ ರವೀಶ್‌ ಪ್ರಮುಖ ನಿರ್ಣಯಗಳು ಸೇರಿದಂತೆ ಎಲ್ಲಾ ನಿರ್ಧಾರವನ್ನು ಏಕಪಕ್ಷೀಯವಾಗಿ ತೆಗೆದುಕೊಳ್ಳುತ್ತಿದ್ದಲ್ಲದೇ ಸೌಜನ್ಯಕ್ಕೂ ಸಹ ನಿರ್ದೇಶಕರೊಂದಿಗೆ ಚರ್ಚಿಸುತ್ತಿರಲಿಲ್ಲ ಎಂಬ ಆರೋಪ ಪ್ರಮುಖವಾಗಿ ಕೇಳಿ ಬಂದಿದೆ. ವಾಸ್ತವವಾಗಿ ಈ ಸೊಸೈಟಿಯಲ್ಲಿ ಕಾಂಗ್ರೆಸ್‌ ಒಲವಿರುವ ನಿರ್ದೇಶಕರು ಹೆಚ್ಚಿದ್ದರು ಬಿಜೆಪಿ ಬೆಂಬಲಿತ ರವೀಶ್‌ಗೆ ಅಧ್ಯಕ್ಷ ಸ್ಥಾನ ನೀಡಲಾಗಿತ್ತು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post