ಸಂಘಟನೆಗೆ ಬಲವರ್ಧನೆ ನೀಡಲು ರಾಜ್ಯ
ಯುವ ಕಾಂಗ್ರೆಸ್ ಸೂಚನೆ
ಡಿಕೆಶಿ ಆದೇಶದ
ಮೇರೆಗೆ ನಾಗರಾಜ್ ಆಯ್ಕೆ
ತೀರ್ಥಹಳ್ಳಿ ಯುವ
ಮುಖಂಡ, ಜಯ ಕರ್ನಾಟಕ ಸಂಘಟನೆಯ ತಾಲ್ಲೂಕು ಅಧ್ಯಕ್ಷ,
ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಕುರುವಳ್ಳಿ ನಾಗರಾಜ್ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ
ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆಶಿ ಆದೇಶದ ಮೇರೆಗೆ ನಾಗರಾಜ್ ಆಯ್ಕೆ
ಪ್ರಕ್ರಿಯೆ ನಡೆದಿದೆ.
ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಮತ್ತು ರಾಷ್ಟ್ರೀಯ ಪದಾಧಿಕಾರಿಗಳು ಕರ್ನಾಟಕದ ಉಸ್ತುವಾರಿಗಳ ನಿರ್ದೇಶನದಂತೆ ಹಾಗೂ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಆದೇಶದ ಮೇರೆಗೆ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನಕಾರ್ಯದರ್ಶಿ ಆಗಿ ಕುರುವಳ್ಳಿ ನಾಗರಾಜ್ ನೇಮಕ ಮಾಡಲಾಗಿದೆ. ಜವಾಬ್ದಾರಿಯನ್ನು ವಹಿಸಿಕೊಂಡು, ರಾಜ್ಯ, ಜಿಲ್ಲಾ ಸಮಿತಿಯ ಮಾರ್ಗದರ್ಶನ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಸೂಚಿಸಲಾಗಿದೆ.