ಶ್ರೀಪತಿ ಆತ್ಮಹತ್ಯೆಗೆ ಶರಣು

ಸಾಲಬಾಧೆ ಸಾವಿಗೆ ಕಾರಣವಾಯಿತೇ..?
ದಶಕದ ಹಿಂದೆಯೇ ಕಂಪ್ಯೂಟರ್‌ ಸೇಲ್ಸ್‌ ಅಂಡ್‌ ಸರ್ವೀಸ್‌ ಉದ್ಯಮಿಯಾಗಿ ಗುರುತಿಸಿಕೊಂಡಿದ್ದ ಯುವಕ

ತೀರ್ಥಹಳ್ಳಿ ಪಟ್ಟಣದಲ್ಲಿ ಈಗ ಚಾಲ್ತಿಯಲ್ಲಿರುವ ಎಲ್ಲಾ ಕಂಪ್ಯೂಟರ್‌ ಹಾಗೂ ಸಿಸಿಟಿವಿ ಸೇವೆಗಳು ಆರಂಭಗೊಳ್ಳುವ ಮೊದಲೇ ಅದನ್ನು ಪ್ರಾರಂಭಿಸಿದಲ್ಲದೇ ಸಾಕಷ್ಟು ಹೆಸರು ಮಾಡಿದ್ದ ಶ್ರೀಪತಿ (37) ಸೊಪ್ಪುಗುಡ್ಡೆಯ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಂಪ್ಯೂಟರ್‌ ಸರ್ವೀಸ್‌ ಜೊತೆಗೆ ಸಮಾಜ ಸೇವೆಯಲ್ಲೂ ಮುಂದಿದ್ದ ಶ್ರೀಪತಿ ವ್ಯವಹಾರಿಕವಾಗಿ ಅಂದುಕೊಂಡ ಮಟ್ಟನ ಯಶಸ್ಸು ಸಾಧಿಸಿಲ್ಲ. ಅಲ್ಲದೇ ಈಗ ಆ ಉದ್ಯಮದಲ್ಲಿ ಹೆಚ್ಚಿನ ಪೈಪೋಟಿ, ವೈಯಕ್ತಿಕ ಸಮಸ್ಯೆಗಳ ಕಾರಣ ಅದರಲ್ಲಿ ಏಕಾಗ್ರತೆ ಸಾಧಿಸಲು ಸಾಧ್ಯವಾಗದೇ ಇತ್ತೀಚೆಗೆ ಖಿನ್ನತೆಗೆ ಒಳಗಾಗಿದ್ದರೂ ಎನ್ನಲಾಗಿದೆ. ಶ್ರೀಪತಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post