ಕುರುವಳ್ಳಿಯಲ್ಲಿ ಆನೆ ಭಯ

ರಾತ್ರೋ ರಾತ್ರೋ ತೀರ್ಥಹಳ್ಳಿ ಪೇಟೆಗೆ ಎಂಟ್ರಿಕೊಟ್ಟ ಕಾಡಾನೆ
ಕಾರ್ಯಾಚರಣೆಗೆ ಇಳಿದ ಅರಣ್ಯ ಇಲಾಖೆ

ತೀರ್ಥಹಳ್ಳಿ ಪಟ್ಟಣದ ಕುರುವಳ್ಳಿಯ ತುಂಗಾ ನದಿಯಲ್ಲಿ ಶನಿವಾರ ಬೆಳಗ್ಗಿನಜಾವ ಕಾಡಾನೆಯೊಂದು ಎಂಟ್ರಿ ಕೊಟ್ಟಿದ್ದು ಬೆಳಗ್ಗಿನ ಜಾವ ಭಯದ ವಾತಾವರಣ ಸೃಷ್ಟಿಯಾಗಿದೆ. ರಾತ್ರಿಯ ವೇಳೆ ಮೇಳಿಗೆ ಗ್ರಾಮದ ಕೆಳೆಕೆರೆಯಲ್ಲಿ 10 ಗಂಟೆಗೆ ಕಾಣಿಸಿಕೊಂಡಿದೆ. 4 ರಿಂದ 5 ವರ್ಷದ ಆನೆ ಇದಾದ್ದು ಎನ್ ಆರ್ ಪುರದಿಂದ ಬದಿರಬಹುದು ಎಂದು ಅರಣ್ಯ ಇಲಾಖೆ ಅನುಮಾನ ವ್ಯಕ್ತಪಡಿಸಿದೆ. ಕುರುವಳ್ಳಿಯ ನಾಗರಕಟ್ಟೆ ಸಮೀಪ ತುಂಗಾ ನದಿಗೆ ಇಳಿದಿದ್ದು ಬೆಳಕು ಬಿಡದ ಕಾರಣ ಇನ್ನೂ ಕೂಡ ಕಣ್ಣಿಗೆ ಕಾಣಿಸಿಕೊಂಡಿಲ್ಲ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post