ಸೇವಾದಳ ಶಿಕ್ಷಣ ಅಗತ್ಯ

ಮಕ್ಕಳಿಗೆ ನಾಯಕತ್ವ ಬೆಳೆಸಲು ಸಹಕಾರಿ -ನಿರಂಜನ್

ತೀರ್ಥಹಳ್ಳಿ ಪಟ್ಟಣದ ಬಿಆರ್‌ಸಿ ಕೇಂದ್ರದಲ್ಲಿ ಸೇವಾದಳ ತರಬೇತಿ ಪಡೆದ ಶಿಕ್ಷಕರ ಪುನಶ್ಚೇತನ ಕಾರ್ಯಕ್ರಮ ಗುರುವಾರ ನಡೆಯಿತು.

ತಾಲ್ಲೂಕು ದೈಹಿಕ ಪರಿವೀಕ್ಷಕ ನಿರಂಜನ್‌ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸೇವಾದಳ ಶಿಕ್ಷಣ ಪ್ರತಿಯೊಂದು ಗ್ರಾಮೀಣ ವಿದ್ಯಾರ್ಥಿಗಳಿಗೆ ತಲುಪಬೇಕು. ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಸುವ ನಿಟ್ಟಿನಲ್ಲಿ ಶಿಕ್ಷಕರು ಸೇವಾದಳವನ್ನು ಸ್ಥಾಪಿಸುವ ಅಗತ್ಯ ಇದೆ. ತೀರ್ಥಹಳ್ಳಿ ತಾಲ್ಲೂಕು ಸಮಿತಿ ಶಿಕ್ಷಕರಿಗಾಗಿ ಉತ್ತಮ ಸಹಾಯಕ ತರಬೇತಿ ಶಿಬಿರ ಆಯೋಜಿಸಬೇಕು ಎಂದು ಸಲಹೆ ನೀಡಿದರು.

ಸೇವಾದಳ ತಾಲ್ಲೂಕು ಉಪಾಧ್ಯಕ್ಷ ಟಿ.ಕೆ. ರಮೇಶ್‌ ಶೆಟ್ಟಿ ಮಾತನಾಡಿ, ಸೇವಾದಳ ಸಂಸ್ಥೆಯೂ ಗಾಂಧಿಜೀ ಆಶಯದಂತೆ ಡಾ.ನಾ.ಸು. ಹರ್ಡಿಕರ್‌ ಸ್ಥಾಪಿಸಿದರು. ಮಕ್ಕಳಿಗೆ ನಾಯಕತ್ವ ಬೆಳೆಸುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಿ ಕರ್ತವ್ಯ ನಿರ್ವಹಿಸಲಿದೆ ಎಂದರು.

ತಾಲ್ಲೂಕು ಅಧ್ಯಕ್ಷ ಕೆಸ್ತೂರು ಮಂಜುನಾಥ್‌ ಮಾತನಾಡಿ, ಶಿಕ್ಷಕರಿಗೆ ಬ್ಯಾಂಡ್ ತರಬೇತಿ, ಧ್ವಜಶಿಬಿರ, ಮಕ್ಕಳಿಗೆ ನಾಯಕತ್ವ ತರಬೇತಿ, ತಾಲ್ಲೂಕು ಮಟ್ಟದ ಮಕ್ಕಳ ಮೇಳ ನಡೆಸಿದ್ದೇವೆ. ಫೆಬ್ರವರಿ ತಿಂಗಳಿನಲ್ಲಿ ಇಲಾಖೆ ಸಹಯೊಗದೊಂದಿಗೆ ಜಿಲ್ಲಾ ಮಟ್ಟದ ಸಹಾಯಕ‌ ತರಬೇತಿ ಶಿಬಿರ ನಡೆಸಲು ತಿರ್ಮಾನಿಸಿದ್ದೇವೆ. ಶಿಕ್ಷಕರು ಇದರ ಸದುಪಯೊಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಪೂರ್ಣೆಶ್ ಕೆಳಕೆರೆ ಸ್ವಾಗತಿಸಿದರು. ಜಿಲ್ಲಾ ಸಂಘಟಕ ಪಸನ್ನ ಕುಮಾರ್ ಹೆಚ್.ಸಿ ಪ್ರಾಸ್ತವಿಸಿದರು. ಸದಸ್ಯರಾದ ಚಿತ್ರಾ ವಂದಿಸಿದರು. ಶಿಕ್ಷಣ ಸಂಯೊಜಕ ನಾಗರಾಜ್, ಸದಸ್ಯ ಸಂತೋಷ್ ಮುಂತಾದವರು ಇದ್ದರು.



ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post