ಆಕಸ್ಮಿಕವಾಗಿ ಹುಲ್ಲಿಗೆ ಬೆಂಕಿ ತಗುಲು ಅವಘಡ

ರಸ್ತೆಯಲ್ಲಿ ಸಂಚರಿಸುವಾಗ ಪಿಕಪ್ ವಾಹನಕ್ಕೆ ವಿದ್ಯುತ್ ತಂತಿ ತಾಗಿ ಅನಾಹುತ
ತೀರ್ಥಹಳ್ಳಿ ತಾಲ್ಲೂಕಿನ ಗುಡ್ಡೇಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಡಿಗ ಮಜಿರೆ ಗ್ರಾಮದಲ್ಲಿ ಆಕಸ್ಮಿಕವಾಗಿ ಹುಲ್ಲಿಗೆ ವಿದ್ಯುತ್ ತಂತಿ ತಾಗಿ ಬಾರಿ ದೊಡ್ಡ ಅನಾಹುತ ತಪ್ಪಿದೆ.
ಪಿಕಪ್ ವಾಹನದಲ್ಲಿ ಹುಲ್ಲು ಸಾಗಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಚಾಲಕನ ಮುಂಜಾಗ್ರತೆ ವಹಿಸಿ ತಕ್ಷಣ ಬೆಂಕಿ ಆರಿಸಲು ಪ್ರಯತ್ನಿಸಿದ್ದಾರೆ. ಗ್ರಾಮಸ್ತರು ಬೆಂಕಿ ನಂದಿಸಲು ಸಹಕರಿಸಿದ್ದು ವಿಷಯ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಪೂರ್ಣ ಪ್ರಮಾಣದ ಅಗ್ನಿ ನಂದಿಸಲು ಯಶಸ್ವಿಯಾಗಿದ್ದಾರೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post