ಕರಾಟೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಸಹೋದರರು

ಜೀವನ್‌ ಮತ್ತು ಪ್ರೀತಮ್‌ ಸಾಧನೆಗೆ ಮೆಚ್ಚುಗೆ

ಶಿವಮೊಗ್ಗದ ಸೆಂಟ್ರಲ್‌ ರೋಟರಿ ಕ್ಲಬ್‌ನಲ್ಲಿ ನಡೆದ 3ನೇ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿ 2023ರ ಶಿವಮೊಗ್ಗ ಮುಕ್ತ ಕರಾಟೆ ಛಾಂಪಿಯನ್‌ಶಿಪ್‌ನಲ್ಲಿ ಜೀವನ್‌ ಮತ್ತು ಪ್ರೀತಮ್‌ ಸಹೋದರರು ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಫೆಬ್ರ ವರಿ 25ರ ಶನಿವಾರ ಶಿವಮೊಗ್ಗ ಜಿಲ್ಲಾ ಶೋಟೊ ಕಾಯ್‌ ಕರಾಟೆ ಅಸೋಸಿಯೇಷನ್‌, ಜಿಲ್ಲಾ ಕರಾಟೆ ಸ್ಪೋರ್ಟ್ಸ್‌ ಅಸೋಸಿಯೇಷನ್‌, ಅಖಿಲ ಕರ್ನಾಟಕ ಸ್ಪೋರ್ಟ್‌ ಕರಾಟೆ ಅಸೋಸಿಯೇಷನ್‌, ಶೋಟೋ ಕಾಯ್‌ ಕರಾಟೆ ಅಸೋಸಿಯೇಷನ್‌ ಆಫ್‌ ಕರ್ನಾಟಕ ಪ್ರಯೋಜಕತ್ವದಲ್ಲಿ ನಡೆದ ಶಿವಮೊಗ್ಗ ಮುಕ್ತ ಕರಾಟೆ ಛಾಂಪಿಉನ್‌ಶಿಫ್‌ ಭಾಗವಹಿಸಿ ಇಬ್ಬರು ಪುಟಾಣಿಗಳು ಉತ್ತಮ ಪ್ರದರ್ಶನ ನೀಡಿದ್ದಾರೆ. ಜೀವನ್‌ ಮತ್ತು ಪ್ರೀತಮ್‌ ಪೊಲೀಸ್‌ ಸಿಬ್ಬಂದಿ ಸಂದೀಪ್‌ ದಂಪತಿಯ ಪುತ್ರರು.


ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post