ತೀರ್ಥಹಳ್ಳಿಗೆ ಬರಲಿದೆ
ಹೆಲಿಪ್ಯಾಡ್
ಒಳಾಂಗಣ ಕ್ರೀಡಾಂಗಣಕ್ಕೆ
ಆರಗ ಒತ್ತು
ತೀರ್ಥಹಳ್ಳಿ ತಾಲ್ಲೂಕಿನ ಸಾರ್ವಜನಿಕ ಕ್ರೀಡಾಂಗಣದಲ್ಲಿ ಹೆಲಿಪ್ಯಾಡ್ ಮತ್ತು ಒಳಾಂಗಣ ಕ್ರೀಡಾಂಗಣಕ್ಕೆ ಜಾಗ ಗುರುತಿಸಲಾಗುತ್ತಿದೆ. ಕ್ರೀಡಾಂಗಣ ಉನ್ನತೀಕರಣಕ್ಕಾಗಿ ಕೇಂದ್ರ ಸರ್ಕಾರಕ್ಕೆ 6 ಕೋಟಿ ಅನುಮೋದನೆ ನೀಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ. ತೀರ್ಥಹಳ್ಳಿ ಸಾಂಸ್ಕೃತಿಕವಾಗಿ ಬೆಳೆದಿದ್ದರು, ಪ್ರತಿನಿತ್ಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುತ್ತಿದೆ. ಅದೇ ರೀತಿ ಇನ್ನು ಮುಂದೆ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದ್ದು ಅಂತರಾಷ್ಟ್ರೀಯ ಮಾದರಿಯಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡಲು ಯೋಜನೆ ಸಿದ್ಧಪಡಿಸಲಾಗುತ್ತಿದೆ ಎಂದು ಭಾನುವಾರ ಪಟ್ಟಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 1 ಕೋಟಿ ವೆಚ್ಚದಲ್ಲಿ ಸಾರ್ವಜನಿಕ ಕ್ರೀಡಾಂಗಣದ ಸುತ್ತ ರಾಜಕಾಲುವೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಈ ಹಿಂದೆ ಪಟ್ಟಣದಲ್ಲಿ ಪ್ರೌಢಶಾಲಾ ಕ್ರೀಡಾಂಗಣ ಎಲ್ಲಾ ಕ್ರೀಡಾ
ಚಟುವಟಿಕೆಗೆ ಬಳಕೆಯಾಗುತ್ತಿತ್ತು. ಸೌಂಡ್ಸ್ ಮತ್ತು ಗಲಾಟೆ ಗದ್ದಲದಿಂದ ಶಾಲಾ ಮಕ್ಕಳಿಗೆ ತೊಂದರೆಯಾಗಿತ್ತು. 1994ರಲ್ಲಿ ಮೊದಲ
ಬಾರಿಗೆ ಶಾಸಕನಾದ ನಂತರ ಕೆರೆ ಮತ್ತು ಭೂದಾನ ಜಮೀನು ದಾಖಲೆಗಳನ್ನು ಕ್ರೀಡಾ ಇಲಾಖೆಗೆ ವರ್ಗಾಯಿಸಿ
ಕ್ರೀಡಾಂಗಣ ನಿರ್ಮಾಣಕ್ಕೆ ಅವಕಾಶ ಮಾಡಿಸಿಕೊಟ್ಟಿದ್ದೇನೆ. ಇನ್ನಷ್ಟು ಅಭಿವೃದ್ಧಿ ಕಾರ್ಯಗಳು
ನಡೆಯಬೇಕಿದ್ದು ಅನುದಾನ ಮಂಜೂರಾತಿಗಾಗಿ ಪ್ರಯತ್ನಿಸುತ್ತಿದ್ದೇನೆ ಎಂದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುಶೀಲ ಶೆಟ್ಟಿ, ಉಪಾಧ್ಯಕ್ಷ ಟಿ. ರೆಹಮತ್ ಉಲ್ಲಾ ಅಸಾದಿ, ಸದಸ್ಯರಾದ ಸಂದೇಶ್ ಜವಳಿ, ಸೊಪ್ಪುಗುಡ್ಡೆ ರಾಘವೇಂದ್ರ, ಯತಿರಾಜ್, ಜ್ಯೋತಿ ಇದ್ದರು.