ಮೇ 2 ಮೇಲಿನ ಕುರುವಳ್ಳಿಯಲ್ಲಿ ಕಾರ್ಮಿಕರ ದಿನಾಚರಣೆ
ಮೇಲಿನ ಕುರುವಳ್ಳಿ ಪೃಥ್ವಿಶ್ರಮ ಕಲ್ಲುಗಣಿ ಹಾಗೂ ನಿರ್ಮಾಣ ಶ್ರಮಿಕರ ಸರ್ವೋದಯ ಸಂಘದಿಂದ ಮೇ 2ರಂದು ಮೇಲಿನ ಕುರುವಳ್ಳಿಯ ಡಾ.ಬಿ.ಆರ್. ಅಂಬೇಡ್ಕರ್ ಸಭಾಭವನದಲ್ಲಿ “ಕಾರ್ಮಿಕ ದಿನಾಚರಣೆ” ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆಯ ಸೌಲಭ್ಯಗಳ ಮಾಹಿತಿ, ಇಲಾಖೆಯ ಧ್ಯೇಯೋದ್ದೇಶ, ನೊಂದಾಣಿ ಮುಂತಾದ ವಿಚಾರಗಳ ಬಗ್ಗೆ ಕಾರ್ಯಗಾರ ನಡೆಯಲಿದೆ.
ಬೆಳಿಗ್ಗೆ 10.00 ಗಂಟೆಗೆ
ಕಾರ್ಮಿಕರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಇನ್ನಿತರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮಕ್ಕೆ ಸರ್ವರನ್ನು ಪೃಥ್ವಿಶ್ರಮ ಕಲ್ಲುಗಣಿ ಹಾಗೂ ನಿರ್ಮಾಣ ಶ್ರಮಿಕರ ಸರ್ವೋದಯ ಸಂಘದ ಪ್ರಧಾನ
ಕಾರ್ಯದರ್ಶಿ ಮಂಜುನಾಥ್ ಎಸ್ ಹಾಗೂ ಪದಾಧಿಕಾರಿಗಳು ಆಹ್ವಾನಿಸಿದ್ದಾರೆ.