ಆರಂಭಿಕ ಹಂತದಲ್ಲಿ ಸಮಾಜಕ್ಕೆ ಪ್ರಾತಿನಿಧ್ಯ ದೊರಕದೇ ಇರುವುದು ವಿಷಾದನೀಯ - ಟಿ.ಎಲ್. ಸುಂದರೇಶ್
ರಾಜ್ಯ ಸಚಿವ ಸಂಪುಟದಲ್ಲಿ ಈಡಿಗ, ಬಿಲ್ಲವ ಸಮುದಾಯದ ಬಿ.ಕೆ. ಹರಿಪ್ರಸಾದ್, ಮಧುಬಂಗಾರಪ್ಪ, ಬೇಳೂರು ಗೋಪಾಲಕೃಷ್ಣ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಟಿ.ಎಲ್. ಸುಂದರೇಶ್ ಪ್ರಕಟಣೆಯಲ್ಲಿ ಒತ್ತಾಯಿಸಿದರು.
ನೂತನ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ರಚನೆಯಾಗಿದ್ದು ಆರಂಭಿಕ ಹಂತದಲ್ಲೇ
ಈಡಿಗ ಮತ್ತು ಬಿಲ್ಲವ ಸಮುದಾಯಕ್ಕೆ ಪ್ರಾತಿನಿಧ್ಯ ದೊರಕದೆ ಇರುವುದು ವಿಷಾದನೀಯ.
ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಅವಕಾಶ
ಕಲ್ಪಿಸಿಕೊಡಬೇಕು ಎಂದು ಹೇಳಿದ್ದಾರೆ.
ಈಡಿಗ, ಬಿಲ್ಲವ ಸಮುದಾಯ ಕಾಂಗ್ರೆಸ್ ಪಕ್ಷವನ್ನು ಸದಾಕಾಲ
ಬೆಂಬಲಿಸಿದೆ. ಸಮುದಾಯ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ, ಕಾಗೋಡು
ತಿಮ್ಮಪ್ಪ, ಜನಾರ್ಧನ
ಪೂಜಾರಿ, ಜಾಲಪ್ಪ, ಮುಂತಾದ ಜನಪರ ನಾಯಕರುಗಳನ್ನು ಕೊಡುಗೆಯಾಗಿ
ನೀಡಿದೆ. ಈಗ ಆಗಿರುವ ತಪ್ಪು ಸರಿಪಡಿಸಿಕೊಂಡು ಸಚಿವ ಸ್ಥಾನಗಳನ್ನು ನೀಡಬೇಕು ಎಂದು ಸುಂದರೇಶ್
ಅಗ್ರಹಿಸಿದ್ದಾರೆ.