ಆರ್ ಎಂ ಮಂಜುನಾಥಗೌಡ ಮತ್ತೆ ಡಿಸಿಸಿ ಬ್ಯಾಂಕ್ ನಿರ್ದೇಶಕ

ಕಾನೂನು ಹೋರಾಟಕ್ಕೆ ಜಯ - ಬ್ಯಾಂಕ್‌ ಬೆಳವಣಿಗೆಗೆ ಹೊಸ ಟ್ವಿಸ್ಟ್

ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನದಿಂದ ಅನರ್ಹತೆಗೊಂಡಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದ್ದರಿಂದ ಆರ್.ಎಂ. ಮಂಜುನಾಥ ಗೌಡರು ಮತ್ತೆ ನಿರ್ದೇಶಕರಾಗಿ ಮುಂದುವರಿಯಲಿದ್ದಾರೆ.

ಆರ್.ಎಂ. ಮಂಜುನಾಥ ಗೌಡರು ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಆಗಿದ್ದವರು. ಸರ್ಕಾರ 29(ಸಿ) ಸಹಕಾರ ಕಾಯ್ದೆ ಅಡಿಯಲ್ಲಿ ಬ್ಯಾಂಕ್ ಸದಸ್ಯತ್ವವನ್ನು ರದ್ದುಮಾಡಿತ್ತು. ಇದರ ವಿರುದ್ಧ ಅವರು ಕಾನೂನು ಹೋರಾಟ ನಡೆಸಿದ್ದರು. ನ್ಯಾಯಾಲಯ ಸರ್ಕಾರದ ಆದೇಶಕ್ಕೆ ತಡಯಾಜ್ಞೆ ನೀಡಿತ್ತು.

ಈ ತಡೆಯಾಜ್ಞೆಯ ನಡುವೆ ಡಿಸಿಸಿ ಬ್ಯಾಂಕಿಗೆ ಹೊಸ ಅಧ್ಯಕ್ಷರು ಕೂಡ ನೇಮಕವಾಗಿದ್ದರು. ಆದರೆ ಈಗ ಅವರ ಸದಸ್ಯತ್ವವನ್ನು ಊರ್ಜಿತಗೊಳಿಸಿ ನ್ಯಾಯಾಲಯ ತೀರ್ಪು ನೀಡಿರುವುದರಿಂದ ಡಿಸಿಸಿ ಬ್ಯಾಂಕಿನ ಬೆಳವಣಿಗೆಗೆ ಹೊಸ ಟ್ವಿಸ್ಟ್ ಸಿಕ್ಕಂತಾಗಿದೆ..

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post