ಕಾನೂನು ಹೋರಾಟಕ್ಕೆ ಜಯ - ಬ್ಯಾಂಕ್ ಬೆಳವಣಿಗೆಗೆ ಹೊಸ ಟ್ವಿಸ್ಟ್
ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನದಿಂದ ಅನರ್ಹತೆಗೊಂಡಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದ್ದರಿಂದ ಆರ್.ಎಂ. ಮಂಜುನಾಥ ಗೌಡರು ಮತ್ತೆ ನಿರ್ದೇಶಕರಾಗಿ ಮುಂದುವರಿಯಲಿದ್ದಾರೆ.
ಆರ್.ಎಂ. ಮಂಜುನಾಥ ಗೌಡರು ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಆಗಿದ್ದವರು. ಸರ್ಕಾರ 29(ಸಿ) ಸಹಕಾರ ಕಾಯ್ದೆ ಅಡಿಯಲ್ಲಿ ಬ್ಯಾಂಕ್ ಸದಸ್ಯತ್ವವನ್ನು ರದ್ದುಮಾಡಿತ್ತು. ಇದರ ವಿರುದ್ಧ ಅವರು ಕಾನೂನು ಹೋರಾಟ ನಡೆಸಿದ್ದರು. ನ್ಯಾಯಾಲಯ ಸರ್ಕಾರದ ಆದೇಶಕ್ಕೆ ತಡಯಾಜ್ಞೆ
ನೀಡಿತ್ತು.
ಈ ತಡೆಯಾಜ್ಞೆಯ ನಡುವೆ ಡಿಸಿಸಿ ಬ್ಯಾಂಕಿಗೆ ಹೊಸ ಅಧ್ಯಕ್ಷರು ಕೂಡ
ನೇಮಕವಾಗಿದ್ದರು. ಆದರೆ ಈಗ ಅವರ ಸದಸ್ಯತ್ವವನ್ನು ಊರ್ಜಿತಗೊಳಿಸಿ ನ್ಯಾಯಾಲಯ ತೀರ್ಪು
ನೀಡಿರುವುದರಿಂದ ಡಿಸಿಸಿ ಬ್ಯಾಂಕಿನ ಬೆಳವಣಿಗೆಗೆ ಹೊಸ ಟ್ವಿಸ್ಟ್ ಸಿಕ್ಕಂತಾಗಿದೆ..