ಜೂನ್‌ 9ರಂದು ದರ್ಬಾರ್‌ ಸಿನಿಮಾ ತೆರೆಗೆ

ನಮ್ಮೂರ ಕಲಾವಿದ ನಟಿದ ಚಲನಚಿತ್ರ
ಸಿನಿಮಾ ಯಶಸ್ವಿಯಾದರೆ ವಿದ್ಯಾರ್ಥಿಗಳಿಗೆ ನೆರವು – ನಟ ಕಾರ್ತಿಕ್‌

ಜೂನ್‌ 9ರಂದು ರಾಜ್ಯದ 100 ಚಿತ್ರ ಮಂದಿರದಲ್ಲಿ ದರ್ಬಾರ್‌ ಚಲನಚಿತ್ರ ತೆರೆಯ ಮೇಲೆ ಬರಲಿದೆ. ತೀರ್ಥಹಳ್ಳಿಯ ವಿನಾಯಕ ಚಿತ್ರಮಂದಿರದಲ್ಲಿ ಚಲನಚಿತ್ರ ಪ್ರದರ್ಶನಕ್ಕೆ ಏರ್ಪಾಡಾಗಿದೆ. ನಿಮ್ಮೂರ ಕಲಾವಿದ ನಟಿಸಿದ ಸಿನಿಮಾಗೆ ಹೆಚ್ಚಿನ ಬೆಂಬಲ ನೀಡಬೇಕು ಎಂದು ಚಿತ್ರನಟ ಕಾರ್ತಿಕ್‌ ಪಟ್ಟಣದ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಅವರು ಪತ್ರಿಕಾಗೋಷ್ಟಿಯಲ್ಲಿ ಕೋರಿಕೊಂಡರು.

ಗ್ರಾಮ ಪಂಚಾಯಿತಿ ಚುನಾವಣಾ ರಾಜಕೀಯದಲ್ಲಿ ಬಹಳಷ್ಟು ಕೌತುಕದ ಘಟನೆಗಳು ನಡೆಯುತ್ತದೆ. ಆ ಸಂದರ್ಭದಲ್ಲಿ ಗ್ರಾಮದೊಳಗೆ ನಡೆಯುವ ಅನೇಕ ಸಂಗತಿಗಳನ್ನು ಆಧಾರವಾಗಿಟ್ಟುಕೊಂಡು ದರ್ಬಾರ್‌ ಸಿನಿಮಾದ ಚಿತ್ರಕಥೆ ರೂಪುಗೊಂಡಿದೆ. ಗ್ರಾಮದ ರಾಜಕೀಯ, ಹಾಸ್ಯದ ಮೂಲಕ ರಸವತ್ತಾಗಿ ಚಿತ್ರಿಸಲಾಗಿದೆ. ಚಲನಚಿತ್ರದಲ್ಲಿ ರಂಗಭೂಮಿ ಸೇರಿದಂತೆ 300ಕ್ಕೂ ಹೆಚ್ಚು ಕಲಾವಿದರು ನಟಿಸಿದ್ದಾರೆ. ಸಿನಿಮಾ ಅದ್ಬುತವಾಗಿ ಮೂಡಿ ಬಂದಿದ್ದು ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಲಿದೆ. ಹಾಸ್ಯದೊಂದಿಗೆ ಸಮಾಜದ ಅಂಕುಡೊಂಕು ತಿಳಿಸುವ ಸಿನಿಮಾ ಇದಾಗಿದೆ. 23 ವರ್ಷಗಳ ಬಳಿಕ ವಿ.ಮನೋಹರ್ ಚಿತ್ರ ನಿರ್ದೇಶಿಸಿದ್ದಾರೆ. ಭದ್ರಾವತಿಯ ಸತೀಶ್‌ ನಾಯಕ ನಟರಾಗಿದ್ದು ಸಿನಿಮಾ ನಿರ್ಮಾಣ ಮಾಡಿದ್ದಾರೆ ಎಂದು ತಿಳಿಸಿದರು.

ಸಿನಿಮಾ ಯಶಸ್ವಿಯಾದರೆ ತಾಲ್ಲೂಕಿನ 100 ವಿದ್ಯಾರ್ಥಿಗಳ ಭವಿಷ್ಯಕ್ಕೆ ನೆರವಾಗುತ್ತೇನೆ. ನನ್ನ ಕೈಲಾದ ಸಹಾಯ ಮಾಡುತ್ತೇನೆ ಎಂದು ಚಿತ್ರನಟ ಕಾರ್ತಿಕ್‌ ಹೇಳಿದರು.

ಪತ್ರಿಕಾಗೋಷ್ಟಿಯಲ್ಲಿ ಪ್ರಮುಖರಾದ ಪೂರ್ಣೇಶ್‌ ಕೆಳಕೆರೆ, ಪ್ರಮೋದ್‌, ಪೂರ್ಣೇಶ್‌ ಪೂಜಾರಿ ಇದ್ದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post