ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪರಿಪೂರ್ಣ 125 ಅಂಕ ಪಡೆದು ತೇರ್ಗಡೆಯಾಗಿರುವ ಮೇಗರವಳ್ಳಿಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ನಿರಂತ್ ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ನೀಡುವ ಕನ್ನಡ ಕೌಸ್ತುಭ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಜುಲೈ 30ರ ಭಾನುವಾರ
ದಾವಣಗೆರೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸನ್ಮಾನ ಪತ್ರ, ಚಿನ್ನದ ಲೇಪನದ ಪದಕ, ಕನ್ನಡತಾಯಿ ಭುವನೇಶ್ವರಿ
ಸ್ಮರಣಿಕೆ ನೀಡಿ ಗೌರವಿಸಲಾಗುತ್ತದೆ.
ನಿರಂತ್ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಮೇಗರವಳ್ಳಿಯ ವೆಂಕಟೇಶ್ ಹೆಗ್ಡೆ ಮತ್ತು ಸರಿತಾ ಎಸ್.ಟಿ. ದಂಪತಿಯ ಪುತ್ರ.