ವಿಶ್ವಕರ್ಮ ಸೌಹಾರ್ದ ಸಹಕಾರಿ ಚುನಾವಣೆ

13 ನಿರ್ದೇಶಕ ಸ್ಥಾನಗಳಿಗೆ ಚುನಾವಣೆ
ಯುವ ಪತ್ರಕರ್ತ ನವೀನ್ ಟಿ.ಆರ್. ಆಯ್ಕೆ

ಹಿರಿಯರು ಸಹಕಾರಿ ಮಾಜಿ ನಿರ್ದೇಶಕ ಜಗದೀಶ್ ಆಚಾರ್ಯ ನೂತನವಾಗಿ ಆಯ್ಕೆಯಾದ ಪತ್ರಕರ್ತ ನವೀನ್ ಟಿ.ಆರ್. ಅವರನ್ನು ಸನ್ಮಾನಿಸುತ್ತಿರುವುದು

ತೀರ್ಥಹಳ್ಳಿ ವಿಶ್ವಕರ್ಮ ಸೌಹಾರ್ದ ಸಹಕಾರಿ ಸಂಘ 2023-28ರ ವರೆಗಿನ 5 ವರ್ಷಗಳ ಅವಧಿಗೆ ಶನಿವಾರ ಚುನಾವಣೆ ಪ್ರಕ್ರಿಯೆ ನಡೆಯಿತು. 13 ಸಂಖ್ಯಾಬಲದ ಸೊಸೈಟಿಯಲ್ಲಿ 2 ಮಹಿಳೆ, 2 ಬಿಸಿಎಂ 'ಎ' ಮತ್ತು 9 ಸಾಮಾನ್ಯ ವರ್ಗಕ್ಕೆ ನಿರ್ದೇಶಕ ಸ್ಥಾನ ಮೀಸಲು ನಿಗಧಿ ಪಡಿಸಲಾಗಿತ್ತು.

ಸ್ಫರ್ಧಿಸಿದ್ದ 24 ಸ್ಪರ್ಧಿಗಳ ಪೈಕಿ ಯುವ ಪತ್ರಕರ್ತ ನವೀನ್ ಟಿ.ಆರ್., ಉಪೇಂದ್ರ, ಶಂಕರಾಚಾರ್ ಬಿ.ಜಿ, ಮನೋಜ್, ಚಂದ್ರಶೇಖರ್, ನಾಗಪ್ಪ ಆಚಾರ್, ಜ್ಯೋತಿ ಎ.ಎಸ್., ಭಾಸ್ಕರ ಸಿ, ಮೋಹನ್ ಎಸ್.ಜಿ., ರಾಘವೇಂದ್ರ ಎನ್, ಶಾರದ, ರಾಘವೇಂದ್ರ ಪಿ, ಮಂಜುನಾಥ್ ಎಸ್ ಗೆಲುವು ಸಾಧಿಸಿದ್ದಾರೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post