ಅಥ್ಲೆಟಿಕ್ಸ್ ಕ್ರೀಡಾಕೂಟ ಉದ್ಘಾಟಿಸಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಗೀತಾ ರಮೇಶ್
ತಾಲ್ಲೂಕು
ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರ ಕ್ರೀಡಾಕೂಟ
ತೀರ್ಥಹಳ್ಳಿ: ಕ್ರೀಡೆಯಲ್ಲಿ ಮಕ್ಕಳ ಭಾಗವಹಿಸುವಿಕೆ ಅತಿ ಮುಖ್ಯ.ವಿಧ್ಯಾರ್ಥಿಗಳು ಕ್ರೀಡೆಯಲ್ಲಿ ಸೋಲು,ಗೆಲುವನ್ನು ಸಮನಾಗಿ ಸ್ವೀಕರಿಸಬೇಕು ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಗೀತಾ ರಮೇಶ್ ಮಾತನಾಡಿದರು.
ಪಟ್ಟಣದ ಡಾ.ಯು.ಆರ್.ಅನಂತಮೂರ್ತಿ ಸ.ಪ್ರೌ.ಶಾಲಾ ಕ್ರೀಡಾಂಗಣದಲ್ಲಿ ನೆಡೆದ ತೀರ್ಥಹಳ್ಳಿ ತಾಲೂಕಿನ ವಲಯ, ತಾಲೂಕು ಮಟ್ಟದ ಬಾಲಕ, ಬಾಲಕಿಯ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ಸೋಲು ಗೆಲುವನ್ನು ಮಕ್ಕಳು ಸಮಾನ ಚಿತ್ತದಿಂದ ಸ್ವೀಕರಿಸಿದಾಗ ಮಾತ್ರ ಭವಿಷ್ಯದಲ್ಲಿ ಎದುರಾಗುವ ಯಾವುದೇ ಸಮಸ್ಯೆಗಳನ್ನು ಎದುರಿಸಲು ಸಾಧ್ಯ, ಕ್ರೀಡೆಯಿಂದ ದೈಹಿಕ, ಮಾನಸಿಕ ಸ್ಥೆರ್ಯ ಹೆಚ್ಚಾಗುತ್ತದೆ. ಮಕ್ಕಳು ಈ ಕ್ರೀಡಾಕೂಟದಲ್ಲಿ ಹೆಚ್ಚಿನ ಸಾಧನೆ ಮಾಡಿ. ಹಾಗೂ ರಾಜ್ಯ ವಾಲಿಬಾಲ್ ತಂಡವನ್ನು ಪ್ರತಿನಿಧಿಸಿರುವ ಆಗುಂಬೆ ಶಾಲೆಯ ತೀರ್ಥಹಳ್ಳಿ ತಾಲೂಕಿನ ಇಬ್ಬರು ವಿಧ್ಯಾರ್ಥಿಗಳ ಸಮಿತ್ ಮತ್ತು ಆರ್ಯನ್ ಸಾಧನೆ ಬಗ್ಗೆ ಶುಭ ಹಾರೈಸಿದರು.
ಮುಖ್ಯ ಅತಿಥಿ ಪ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ರತ್ನಾಕರ್ ಶೆಟ್ಟಿ ಮಾತನಾಡಿ ನಾನು ಒಬ್ಬ ಕ್ರೀಡಾಪಟುವಾಗಿ ಈ ಮೈದಾನದಲ್ಲಿ ಆಡಿದ್ದೇನೆ, ನನ್ನ ಶಾಲಾ ದಿನಗಳಲ್ಲಿ ಅಥ್ಲೆಟಿಕ್ಸ್ ವಿಭಾಗದ 1500ಮೀಟರ್ನಲ್ಲಿ ಓಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದೆ.
ಮಕ್ಕಳು ಕ್ರೀಡೆಯಲ್ಲಿ ಶ್ರಮದಿಂದ ಆಡಿದರೆ ಸಾಧನೆ ಸಾಧ್ಯ. ಶಿಕ್ಷಕರು, ಪೋಷಕರು ಮಕ್ಕಳಿಗೆ ಪ್ರೋತ್ಸಾಹಿಸಬೇಕು ಎಂದರು.
ಕ್ರೀಡಾಕೂಟದ ಧ್ವಜಾರೋಹಣವನ್ನು ಸರ್ಕಾರಿ ಪ.ಪೂ. ಕಾಲೇಜಿನ ಪ್ರಾಂಶುಪಾಲೆ ಸುಧಾ.ವೈ.ಎಂ.ನೆರವೇರಿಸಿ ಶುಭಹಾರೈಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ರಾಂಚಂದ್ರ ಕೊಪ್ಪಲು ವಹಿಸಿದ್ದರು.
ವೇದಿಕೆಯಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಜಿ.ಕೆ.ಗಿರಿರಾಜ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಮು.ಬಿ, ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ರಮೇಶ್ ಕೆ.ವಿ., ಎಸ್.ಡಿ.ಎಂ.ಸಿ. ಸದಸ್ಯರಾದ ವಿನಯ್ ಕುಮಾರ್, ರವಿಕಮಲ್, ಕಿರಣ್ ಆಲ್ಬನ್ ಓಲಿವರ್, ಪ್ರಕಾಶ್, ಸುಪ್ರೀತಾ, ಪುಷ್ಪಲತಾ, ಭವ್ಯ, ಪ್ರಾಂಶುಪಾಲ ದೇವೇಂದ್ರ ನಾಯ್ಕ್ ಮುಂತಾದವರಿದ್ದರು.