ಅವಿರೋಧವಾಗಿ ಆಯ್ಕೆಯಾದ ಸಹಕಾರಿ ಮುಖಂಡ
ಶಿವಮೊಗ್ಗ ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷರಾಗಿ ಸಹಕಾರಿ ಮುಖಂಡ ಆರ್.ಎಂ. ಮಂಜುನಾಥ ಗೌಡ ಅವಿರೋಧವಾಗಿ ಶುಕ್ರವಾರ ಆಯ್ಕೆಯಾಗಿದ್ದಾರೆ.ಮಧ್ಯಾಹ್ನ 1 ಗಂಟೆಯ ವರೆಗೆ ನಾಮಪತ್ರ ಸಲ್ಲಿಕೆ ಇತ್ತು. ಆದರೆ ಅಧ್ಯಕ್ಷ ಆಕಾಂಕ್ಷಿಗಳು ಬೇರೆ ಯಾರು ಕೂಡ ನಾಮಪತ್ರ ಸಲ್ಲಿಸದ ಹಿನ್ನಲೆಯಲ್ಲಿ ಮಂಜುನಾಥ ಗೌಡರ ಆಯ್ಕೆಯನ್ನು ಸಿಂಧುಗೊಳಿಸಲಾಯಿತು.
ಡಿಸಿಸಿ ಅಧ್ಯಕ್ಷರಾಗಿದ್ದ ಚನ್ನವೀರಪ್ಪ ಅವರನ್ನು ಈಚೆಗೆ ಅವಿಶ್ವಾಸ ನಿರ್ಣಯದ ಮೂಲಕ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲಾಗಿತ್ತು. ಪ್ರಭಾರ ಅಧ್ಯಕ್ಷರಾಗಿ ಉಪಾಧ್ಯಕ್ಷರಾಗಿದ್ದ ಷಡಕ್ಷರಿ ಮುಂದುವರೆದಿದ್ದರು. ಇದೀಗ ಶುಕ್ರವಾರ ನಡೆದ ಚುನಾವಣೆಯಲ್ಲಿ ಮಂಜುನಾಥ ಗೌಡರು ತಮ್ಮ ಹಿಂದಿನ ಇದ್ದ ಎಲ್ಲಾ ಸವಾಲುಗಳನ್ನು ಮೆಟ್ಟಿ ನಿಲ್ಲುವ ಮೂಲಕ ಮತ್ತೊಮ್ಮೆ ಅಧ್ಯಕ್ಷರಾಗಿ ಆಯ್ಕೆಯಾಗಿ ವಿರೋಧಿಗಳನ್ನು ಸದೆ ಬಡಿದಿದ್ದಾರೆ.