ಡಿಸಿಸಿಗೆ ಆರ್.ಎಂ. ಮಂಜುನಾಥ ಗೌಡ ಸಾರಥ್ಯ

ಅವಿರೋಧವಾಗಿ ಆಯ್ಕೆಯಾದ ಸಹಕಾರಿ ಮುಖಂಡ

ಶಿವಮೊಗ್ಗ ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷರಾಗಿ ಸಹಕಾರಿ ಮುಖಂಡ ಆರ್.ಎಂ. ಮಂಜುನಾಥ ಗೌಡ ಅವಿರೋಧವಾಗಿ ಶುಕ್ರವಾರ ಆಯ್ಕೆಯಾಗಿದ್ದಾರೆ.

ಮಧ್ಯಾಹ್ನ 1 ಗಂಟೆಯ ವರೆಗೆ ನಾಮಪತ್ರ ಸಲ್ಲಿಕೆ ಇತ್ತು. ಆದರೆ ಅಧ್ಯಕ್ಷ ಆಕಾಂಕ್ಷಿಗಳು ಬೇರೆ ಯಾರು ಕೂಡ ನಾಮಪತ್ರ ಸಲ್ಲಿಸದ ಹಿನ್ನಲೆಯಲ್ಲಿ ಮಂಜುನಾಥ ಗೌಡರ ಆಯ್ಕೆಯನ್ನು ಸಿಂಧುಗೊಳಿಸಲಾಯಿತು.

ಡಿಸಿಸಿ ಅಧ್ಯಕ್ಷರಾಗಿದ್ದ ಚನ್ನವೀರಪ್ಪ ಅವರನ್ನು ಈಚೆಗೆ ಅವಿಶ್ವಾಸ ನಿರ್ಣಯದ ಮೂಲಕ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲಾಗಿತ್ತು. ಪ್ರಭಾರ ಅಧ್ಯಕ್ಷರಾಗಿ ಉಪಾಧ್ಯಕ್ಷರಾಗಿದ್ದ ಷಡಕ್ಷರಿ ಮುಂದುವರೆದಿದ್ದರು. ಇದೀಗ ಶುಕ್ರವಾರ ನಡೆದ ಚುನಾವಣೆಯಲ್ಲಿ ಮಂಜುನಾಥ ಗೌಡರು ತಮ್ಮ ಹಿಂದಿನ ಇದ್ದ ಎಲ್ಲಾ ಸವಾಲುಗಳನ್ನು ಮೆಟ್ಟಿ ನಿಲ್ಲುವ ಮೂಲಕ ಮತ್ತೊಮ್ಮೆ ಅಧ್ಯಕ್ಷರಾಗಿ ಆಯ್ಕೆಯಾಗಿ ವಿರೋಧಿಗಳನ್ನು ಸದೆ ಬಡಿದಿದ್ದಾರೆ.


ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post