ಆಗುಂಬೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ

ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ

ಜಿಲ್ಲಾ ಪೊಲೀಸ್‌ ಇಲಾಖೆ, ಆಗುಂಬೆ ಪೊಲೀಸ್‌ ಠಾಣೆ, ನಕ್ಸಲ್‌ ನಿಗ್ರಹ ಪಡೆ, ಜಿಲ್ಲಾ ಪಂಚಾಯಿತಿ ಶಿವಮೊಗ್ಗ, ತಾಲ್ಲೂಕು ಪಂಚಾಯಿತಿ ತೀರ್ಥಹಳ್ಳಿ, ಗ್ರಾಮ ಪಂಚಾಯಿತಿ ಆಗುಂಬೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶಿವಮೊಗ್ಗ, ರಕ್ತನಿಧಿ ಕೇಂದ್ರ ಮೆಗ್ಗಾನ್‌, ಲಯನ್ಸ್‌ ಕ್ಲಬ್‌ ಆಗುಂಬೆ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಿತು.

ಅಧ್ಯಕ್ಷತೆಯನ್ನು ಲಯನ್ಸ್‌ ಕ್ಲಬ್‌ ಅಧ್ಯಕ್ಷರಾದ ವೀಣಾ ಗಿರೀಶ್‌ ವಹಿಸಿದ್ದರು. ಪೊಲೀಸ್‌ ಉಪಾಧೀಕ್ಷಕ ಗಜಾನನ ವಾಮನ ಸುತಾರ ಹಾಗೂ ಪೊಲೀಸ್‌ ತೀರ್ಥಹಳ್ಳಿ ವೃತ್ತ ನಿರೀಕ್ಷಕ ಅಶ್ವಥ್‌ ಗೌಡ, ಆಗುಂಬೆ ಪೊಲೀಸ್‌ ಉಪನಿರೀಕ್ಷಕ ರಂಗನಾಥ ಅಂತರಗಟ್ಟಿ, ಸಿಬ್ಬಂದಿಗಳಾದ ಅನಿಲ್‌ ಕುಮಾರ್‌, ಸುನಿಲ್‌, ಪ್ರಮುಖರಾದ ಅರುಣ್‌ ಗುಡ್ಡೆಕೇರಿ, ಮಯೂರ್‌ ಹೆಗಡೆ, ಸುಧೀರ ಮಲ್ಯ ಇದ್ದರು.




ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post