ತನಿಖಾ ಸಂಸ್ಥೆ ಬಳಸಿ ಬಿಜೆಪಿಯೇತರರಿಗೆ ಕಿರುಕುಳ
ನರೇಂದ್ರ ಮೋದಿ ನೇತೃತ್ವದ ಬಿಜೆಪಿ ವಿರುದ್ಧ ಪ್ರತಿಭಟನೆ
ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಪಕ್ಷವು ತನ್ನ ಅಧಿಕಾರವನ್ನು ದುರುಪಯೋಗ ಪಡೆಸಿಕೊಳ್ಳುತ್ತಿದೆ.
ಕೇಂದ್ರ ತನಿಖಾ ಸಂಸ್ಥೆಗಳನ್ನು ಬಿಜೆಪಿಯೇತರ ಪಕ್ಷದ ಮುಖಂಡರುಗಳಿಗೆ ಕಿರುಕುಳ ನೀಡಲು
ಬಳಸಿಕೊಳ್ಳುತ್ತಿದೆ. ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ವಿರೋಧ ಪಕ್ಷದವರನ್ನು ಬೆದರಿಸುವ ಈ ಪ್ರಜಾತಂತ್ರ
ವಿರೋಧಿ ಕೃತ್ಯದ ವಿರುದ್ಧ ಮಾಜಿ ಸಚಿವ ಕಿಮ್ಮನೆ ನೇತೃತ್ವದಲ್ಲಿ ಶುಕ್ರವಾರ ತೀರ್ಥಹಳ್ಳಿಯ
ಕಾಂಗ್ರೆಸ್ ಕಚೇರಿ ಮುಂಭಾಗದಿಂದ ಬೆಳಿಗ್ಗೆ 10 ಗಂಟೆಗೆ ಪಾದಯಾತ್ರೆ, ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬ್ಲಾಕ್
ಕಾಂಗ್ರೆಸ್ ಅಧ್ಯಕ್ಷ ಕೆಸ್ತೂರು ಮಂಜುನಾಥ್ ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಮುಖಂಡ, ಶಿವಮೊಗ್ಗ ಜಿಲ್ಲಾ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ.ಆರ್
ಎಂ ಮಂಜುನಾಥ ಗೌಡರ ಮನೆಗೆ ಕೇಂದ್ರ ಇಡಿ ಇಲಾಖೆಯು ದಾಳಿ ಮಾಡಿದ್ದು ಕೇಂದ್ರದ ಈ ದಮನಕಾರಿ ನೀತಿಯನ್ನು
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ತೀರ್ಥಹಳ್ಳಿ ವಿಧಾನ ಸಭಾ ಕ್ಷೇತ್ರವು ತೀವ್ರವಾಗಿ ಖಂಡಿಸುತ್ತದೆ.
ಗಾಂಧಿಭವನದಲ್ಲಿ ಸಭೆ ಸೇರಿ ನಂತರ ಪಾದಯಾತ್ರೆಯ ಮೂಲಕ ತಾಲ್ಲೂಕು ಕಛೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಲಾಗುದು.
ಈ ಪ್ರತಿಭಟನೆಗೆ ಪಕ್ಷದ ಎಲ್ಲಾ ಮುಖಂಡರು ಕಾರ್ಯಕರ್ತರು ಅಭಿಮಾನಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ
ಭಾಗವಹಿಸಬೇಕಾಗಿ ಕೋರಿದ್ದಾರೆ.