ಹಡಗಿನಮಕ್ಕಿ ಗ್ರಾಮದಲ್ಲಿ ವಿಚಿತ್ರ ಬ್ಯಾನರ್

"ನಾಯಿ ಮರಿ ಬಿಡುವವರು ಹೆಂಡತಿ ಮಕ್ಕಳನ್ನು ಬಿಡಿ"
"ಯಾರಾದರೂ ಸಾಕುತ್ತಾರೆ"

ತೀರ್ಥಹಳ್ಳಿ ತಾಲ್ಲೂಕಿನ ದೇವಂಗಿ ಸಮೀಪದ ಹಡಗಿನಮಕ್ಕಿ ಗ್ರಾಮದಲ್ಲಿ ವಿಚಿತ್ರವಾದ ಬ್ಯಾನರ್ ಹಾಕಲಾಗಿದೆ. "ಹಡಗಿನಮಕ್ಕಿ ಗ್ರಾಮದಲ್ಲಿ ನಾಯಿ ಮರಿ ತಂದು ಬಿಡುವವರು ತಮ್ಮ ಹೆಂಡತಿ ಮಕ್ಕಳನ್ನು ಇಲ್ಲೇ ತಂದು ಬಿಡಿ. ಯಾರಾದರೂ ಸಾಕುತ್ತಾರೆ" ಎಂಬ ಅತ್ಯಂತ ಬೇಸರದ ಬ್ಯಾನರ್ ಹಾಕಲಾಗಿದೆ.
ಅನೇಕರು ತಮ್ಮ ಮನೆಯಲ್ಲಿ ನಾಯಿಗಳನ್ನು ಸಾಕುತ್ತಾರೆ. ಆದರೆ ಮರಿಗಳು ಬೇಡ ಎಂಬ ನಿರ್ಧಾರಕ್ಕೆ ಬರುತ್ತಿದ್ದಾರೆ. ಅಪ್ಪಿ ತಪ್ಪಿ ನಾಯಿ ಮರಿ ಹಾಕಿದರೆ ಬೀದಿಯಲ್ಲಿ ಬಿಟ್ಟು ಹೋಗುತ್ತಿದ್ದು ಅನೇಕ ಪ್ರಾಣಿ ಪ್ರೀಯರ ಅಸಮಾಧಾನಕ್ಕೆ ಕಾರಣವಾಗಿದೆ. ಮನೆಯಲ್ಲಿ ಹೆಣ್ಣು ನಾಯಿ ಇದ್ದರೆ ಅದು ಮರಿ ಹಾಕದಂತೆ ಶಸ್ತಚಿಕಿತ್ಸೆ ಮಾಡಿಸಬಹುದು ಎಂಬುದು ಅನೇಕರಿಗೆ ತಿಳಿಯದ ವಿಚಾರವಾಗಿರುವುದು ಬೇಸರದ ಸಂಗತಿಯಾಗಿದೆ.
ಈ ಹಿನ್ನಲೆಯಲ್ಲಿ ಸಾರ್ವಜನಿಕರನ್ನು ಎಚ್ಚರಿಸುವ ಕೆಲಸ ಬ್ಯಾನರ್ ಮೂಲಕ ಮಾಡಲಾಗಿದೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post