ಮೂವರು ಸಜೀವ ದಹನ
ಮನಕಲಕುವ ಘಟನೆಗೆ ಬೆಚ್ಚಿದ ಜನತೆ
ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿ ಸಮೀಪ ಕೆಕೋಡ್ ಎಂಬಲ್ಲಿ ಒಂದೇ ಕುಟುಂಬದ ಮೂವರು ಸಜೀವ ದಹನವಾದ ಮನಕಲಕುವ ಘಟನೆಯೊಂದು ಬೆಳ್ಳಂಬೆಳಿಗ್ಗೆ ನಡೆದಿದೆ. ಓರ್ವನ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮನೆಯ ಒಳಗಿನ ಕೋಣೆಯೊಳಗೆ ಕಟ್ಟಿಗೆಗಳನ್ನು ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಬೆಂಕಿ ದುರಂತದಲ್ಲಿ ಕುಟುಂಬದ ಹಿರಿಯರಾದ ಅರ್ಚಕ ವೃತ್ತಿಯಲ್ಲಿದ್ದ ರಾಘವೇಂದ್ರ ಕೆಕೋಡ್ (65), ಪತ್ನಿ ನಾಗರತ್ನಾ (55), ಹಿರಿಯ ಪುತ್ರ ಶ್ರೀರಾಮ್ (30) ಸಜೀವವಾಗಿ ಬೆಂಕಿಗೆ ಆಹುತಿಯಾಗಿದ್ದಾರೆ. ಇನ್ನೋರ್ವ ಪುತ್ರ ಭರತ್ (28) ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅರಳಸುರಳಿಯ ಕಲ್ಲೋಣಿ. ಕೇಕೋಡ್ ಅನ್ನೋದು ಅವರ ಸರ್ ನೇಮ್. ಊರು ಅಲ್ಲ.
ReplyDelete