ಆರ್‌ಎಂಎಂ ಮನೆ ಮೇಲೆ ಇಡಿ ದಾಳಿ

ನಾಳೆಯ “ತೌರೂರ ಸಂಮಾನ” ಕಾರ್ಯಕ್ರಮ ಮುಂದೂಡಿಕೆ
ಶೀಘ್ರದಲ್ಲಿ ನಿಗಧಿಪಡಿಸಿದಂತೆ ಕಾರ್ಯಕ್ರಮ – ಬಸವಾನಿ ವಿಜಯದೇವ್‌

ರಾಜ್ಯ ಸಹಕಾರಿ ಮುಖಂಡ, ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತರಾದ, ಶಿವಮೊಗ್ಗ ಜಿಲ್ಲಾ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡರಿಗಾಗಿ ಅಕ್ಟೋಬರ್‌ 6ರ ಶುಕ್ರವಾರ ಬೆಳಿಗ್ಗೆ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಆಯೋಜಿಸಿದ್ದ “ತೌರೂರ ಸಂಮಾನ” ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಸಹಕಾರಿ ವೇದಿಕೆ ಅಧ್ಯಕ್ಷ ಬಸವಾನಿ ವಿಜಯದೇವ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿರುವ ಆರ್.‌ಎಂ. ಮಂಜುನಾಥ ಗೌಡರು ವಿವಿಧ ರೀತಿಯ ದಾಖಲೆಗಳನ್ನು ಪೂರೈಸುವ ಹಿನ್ನಲೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸುವುದು ಸಾಧ್ಯವಾಗುತ್ತಿಲ್ಲ. ಸರ್ಕಾರದ ಹಂತದಲ್ಲಿ ದಾಖಲೆಗಳನ್ನು ಪೂರೈಸಬೇಕು ಹಾಗೂ ಶೋಧಕ್ಕೆ ಬಂದಿರುವ ಅಧಿಕಾರಿಗಳು ಸಹಕಾರ ನೀಡಬೇಕಿದ್ದು ವಿವಿಧ ಕಡೆಗಳಲ್ಲಿ ನಡೆದಿರುವ ಶೋಧ ದಾಖಲೆಗಳಿಗೆ ಸಹಿ ಒದಗಿಸಬೇಕು. ಹಾಗಾಗಿ ಈ ಒತ್ತಡದ ಸಂದರ್ಭದಲ್ಲಿ ಸ್ವತಃ ಮಂಜುನಾಥ ಗೌಡರೇ ಈ ಕಾರ್ಯಕ್ರಮದಲ್ಲಿ ಭಾಗಿಯಾಗುವುದು ಬಹುತೇಕ ಅನುಮಾನವಾಗಿರುವ ಕಾರಣ ಅನಿವಾರ್ಯವಾಗಿ ಈ ಕಾರ್ಯಕ್ರಮ ಮುಂದೂಡಲಾಗುತ್ತಿದ್ದು ನಿಗಧಿ ಪಡಿಸಿದಂತೆ ಶೀಘ್ರದಲ್ಲಿ ಮತ್ತೊಂದು ದಿನಾಂಕದಲ್ಲಿ ಅದ್ದೂರಿಯಾಗಿ ನೆರವೇರಲಿದೆ ಎಂದು ಬಸವಾನಿ ವಿಜಯದೇವ್‌ ತಿಳಿಸಿದ್ದಾರೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post