ಬಿ.ಎಸ್.ಯಡಿಯೂರಪ್ಪ ಪುತ್ರನಿಗೆ ಹೈಕಮಾಂಡ್ ಮಣೆ ಹಾಕಿದ್ದು, ಬಿವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಆಯ್ಕೆ ಮಾಡಿದೆ.
ಒಂದೆಡೆ ಬಿಎಸ್ವೈ ಸಿಎಂ ಗಾದಿಯಿಂದ ಇಳಿದಿದ್ದರು, ಮತ್ತೊಂದೆಡೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ತೊರೆದಿದ್ದರು. ಈ ಬಳಿಕ ಬಿಜೆಪಿ ಪಕ್ಷದಲ್ಲಿ ಲಿಂಗಾಯತರನ್ನು ಕಡೆಗಣಿಸುತ್ತಿದ್ದಾರೆ ಎಂಬ ಮಾತು ಕೇಳಿ ಬಂದಿತ್ತು. ಈಗ ಮತ್ತೆ ಲಿಂಗಾಯತ ಮತ ಸೆಳೆಯಲು ರಣತಂತ್ರ ರೂಪಿಸಿರುವ ಬಿಜೆಪಿ ಯಡಿಯೂರಪ್ಪ ಅವರ ಮಗ ಬಿವೈ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದೆ.