ಡಿ.8 – ರಂಜದಕಟ್ಟೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ

ಡಿ.8 – ರಂಜದಕಟ್ಟೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ

ಇಲ್ಲಿನ ರಂಜದಕಟ್ಟೆಯ ಶ್ರೀ ಚಾಮುಂಡೇಶ್ವರಿ ಶ್ರೀ ಹೊನ್ನತ್ತಮ್ಮ ಶ್ರೀ ಗುಳ್ಳೆಮಾರಿಯಮ್ಮ ದೇವಾಲಯದಲ್ಲಿ ಡಿಸೆಂಬರ್‌ 8ರ ಶುಕ್ರವಾರ ಸಂಜೆ 7 ಗಂಟೆಗೆ ದೀಪೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ. ದೇವರುಗಳ ಪಲ್ಲಕ್ಕಿಯೂ ಸಂಜೆ 4.30ಕ್ಕೆ ಮೆರವಣಿಗೆಯಲ್ಲಿ ಶಿವರಾಜಪುರ ಸಾಲುಕಟ್ಟೆ ಶ್ರೀ ಗಣಪತಿ ದೇವಾಲಯ ತಲುಪಿ ಅಲ್ಲಿಂದ ಪುನಃ 7 ಗಂಟೆಗೆ ತಲುಪಿ ಪುನಃ ರಂಜದಕಟ್ಟೆಯ ದೇವರ ಸನ್ನಿಧಿಗೆ ತಲುಪಲಿದೆ.

ಸಂಜೆ 8 ಗಂಟೆಗೆ ಭೋಜನ ಪ್ರಸಾದ ಏರ್ಪಡಿಸಲಾಗಿದ್ದು ಎಲ್ಲಾ ಭಕ್ತಾಧಿಗಳು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನ ಸಮಿತಿ ಪರವಾಗಿ ಅಧ್ಯಕ್ಷ ಬಾಲಚಂದ್ರ ಹಾಗೂ ಕಾರ್ಯದರ್ಶಿ ಪ್ರವೀಣ್‌ ಹೃತ್ಪೂರ್ವಕವಾಗಿ ಕೋರಿದ್ದಾರೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post