ಜಿಂಕೆ ಶಿಕಾರಿ ಓರ್ವ ಆರೋಪಿ ಅರೆಸ್ಟ್

ಮೂವರು ಆರೋಪಿಗಳು ಗಾಯಬ್

ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆ ವಲಯಾರಣ್ಯ ವಿಭಾಗ ವ್ಯಾಪ್ತಿಯ ಕೀಗಡಿ ಗ್ರಾಮದಲ್ಲಿ ಕಳ್ಳಬೇಟೆಯಿಂದ ಜಿಂಕೆ ಶಿಕಾರಿ ಮಾಡಿ ಮಾಂಸ ಸಿದ್ಧಪಡಿಸುತ್ತಿದ್ದ ಆರೋಪಿ ತಮಿಳುನಾಡು ಮೂಲದ ರಮೇಶ್ (40) ಎಂಬಾತನನ್ನು ಮಂಡಗದ್ದೆ ವಲಯಾರಣ್ಯಾಧಿಕಾರಿ ಎಂ.ಪಿ. ಆದರ್ಶ ನೇತೃತ್ವದ ತಂಡ ಬಂದಿಸಿದೆ.
ಜಿಂಕೆ ತಲೆ, ಕಾಲು, ಮಾಸ ದಾಸ್ತಾನು ಮಾಡುತ್ತಿದ್ದ 3 ಜನ ಆರೋಪಿಗಳು ತಪ್ಪಿಸಿಕೊಂಡಿದ್ದು ಮಂಡಗದ್ದೆ ವಲಯಾರಣ್ಯ ವಿಭಾಗದಲ್ಲಿ ಪ್ರಕರಣ ದಾಖಲಾಗಿದೆ. ವನ್ಯಜೀವಿ ಸಂರಕ್ಷಣೆ ಕಾಯಿದೆಯಡಿ ಕಳ್ಳಬೇಟೆಯಿಂದ ಪ್ರಾಣಿ ಹತ್ಯೆ ಕೃತ್ಯಕ್ಕೆ 3 ವರ್ಷ ಸೆರೆವಾಸ, 1 ಲಕ್ಷ ರೂಪಾಯಿ ದಂಡ ವಿಧಿಸುವ ಅವಕಾಶ ಇದೆ.
ಡಿಸಿಎಫ್ ಶಿವಶಂಕರ್, ಎಸಿಎಫ್ ಪ್ರಕಾಶ್ ಮಾರ್ಗದರ್ಶನದಲ್ಲಿ ತಂಡ ಕಾರ್ಯಾಚರಣೆ ನಡೆಸಿದೆ. ಡಿಆರ್ ಎಫ್ಓ ಸುಹಾಸ್, ಗಸ್ತು ಅರಣ್ಯ ಪಾಲಕರಾದ ದುರುಗಪ್ಪ, ಮಹಾದೇವ ಕಣ್ಣೂರ, ವಾಹನ ಚಾಲಕ ನವೀನ್ ಮುಂತಾದವರು ಇದ್ದರು.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post