ಆಧಾರ್‌ ತಿದ್ದುಪಡಿ ಕೇಂದ್ರ ಆರಂಭ

ತೀರ್ಥಹಳ್ಳಿ ತಾಲ್ಲೂಕು ಕಚೇರಿಯಲ್ಲೇ ತಿದ್ದುಪಡಿಗೆ ಅವಕಾಶ

ತೀರ್ಥಹಳ್ಳಿ ತಾಲ್ಲೂಕು ಕಚೇರಿಯಲ್ಲಿ ಈ ಹಿಂದೆ ಕಾರ್ಯ ನಿರ್ವಹಿಸುತ್ತಿದ್ದ ಆಧಾರ್‌ ತಿದ್ದುಪಡಿ ಕೇಂದ್ರ ತಾಂತ್ರಿಕ ದೋಷಗಳಿಂದ ವರ್ಷಗಳಿಂದ ಸ್ಥಗಿತಗೊಂಡಿತ್ತು. ತಾಂತ್ರಿಕ ದೋಷಗಳನ್ನು ಸರಿಪಡಿಸಿಕೊಂಡಿದ್ದು ಇದೀಗ ತೀರ್ಥಹಳ್ಳಿಯ ಮುಖ್ಯ ಅಂಚೆ ಕಚೇರಿ ಅಲ್ಲದೇ ತಾಲ್ಲೂಕು ಕಚೇರಿಯಲ್ಲಿಯೂ ಆಧಾರ್‌ ತಿದ್ದುಪಡಿಗೆ ಅವಕಾಶ ಲಭ್ಯವಾಗಿದೆ. ಬಯೋಮೆಟ್ರಿಕ್‌, ಡೆಮೋಗ್ರಾಫಿಕ್‌ ಸೇವೆಗಳು ಕೂಡ ತಾಲ್ಲೂಕು ಕಚೇರಿಯಲ್ಲಿಯೇ ಆರಂಭಗೊಂಡಿದೆ.

ಆಧಾರ್‌ ಕಾರ್ಡ್‌ ಫೋನ್‌ ನಂಬರ್‌ ಬದಲಾವಣೆ, ವಿಳಾಳ, ಹೆಸರು ಬದಲಾವಣೆ ಮುಂತಾದವುಗಳಿಗೆ ತಾಲ್ಲೂಕು ಕಚೇರಿ ಸಮೀಪ ತೆರೆದಿರುವ ಕರ್ನಾಟಕ ಒನ್‌ ಸೇವಾ ಕೇಂದ್ರದಲ್ಲಿ ಲಭ್ಯವಿದೆ. ಆಧಾರ್‌ ಕಾರ್ಡ್‌ ತಿದ್ದುಪಡಿ ಮಾಡಿಸಿಕೊಳ್ಳುವವರಿಗೆ ಇದೀಗ ಉತ್ತಮ ಅವಕಾಶ ಲಭಿಸಿದ್ದು ಮೂರು ಸ್ಥಳಗಳ ಸೇವಾ ಕೇಂದ್ರ ಬಳಕೆ ಮಾಡಿಕೊಳ್ಳಬಹುದು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post