ಗೌರವಾರ್ಥ ಸಹ್ಯಾದ್ರಿ ಶಿಕ್ಷಣ ಸಂಸ್ಥೆಗೆ ರಜೆ
ಸುದೀರ್ಘ ಅವಧಿಗೆ ತೀರ್ಥಹಳ್ಳಿ ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ, ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಕಡ್ತೂರು ಶ್ರೀನಿವಾಸ ಗೌಡ ಭಾನುವಾರ ಹೃದಯಾಘಾತದಿಂದ ನಿಧನರಾದರು. ಮೃತರಿಗೆ ಪತ್ನಿ ಇದ್ದಾರೆ.
ಅರೇಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ 4 ಅವಧಿಗೆ, ಒಂದು ಅವಧಿಗೆ ಮಂಡಲ ಪಂಚಾಯಿತಿ ಪ್ರಧಾನರಾಗಿ
ಕಾರ್ಯ ನಿರ್ವಹಿಸಿದ್ದಾರೆ. ತಾಲ್ಲೂಕು ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ
ಸೇವೆ ಸಲ್ಲಿಸಿದ್ದಾರೆ. ತಾಲ್ಲೂಕು ಅಡಿಕೆ ಸೌಹಾರ್ದ ಸಹಕಾರ ಸಂಘದ ನಿರ್ದೇಶಕರಾಗಿದ್ದರು. ವಿವಿಧ ಸಂಘ
ಸಂಸ್ಥೆ ಸೇರಿದಂತೆ ಸಾರ್ವಜನಿಕ ಜೀವನದಲ್ಲಿ ಸುಮಾರು 60 ವರ್ಷಗಳ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಶ್ರೀನಿವಾಸ ಗೌಡರ ಗೌರವಾರ್ಥ ತಾಲ್ಲೂಕು ಒಕ್ಕಲಿಗರ ಸಂಘದ ನಿರ್ವಹಣೆಯಲ್ಲಿರುವ ಸಹ್ಯಾದ್ರಿ ಶಿಕ್ಷಣ
ಸಂಸ್ಥೆಯ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಅಂತ್ಯಸಂಸ್ಕಾರ ಸೋಮವಾರ ನಡೆಯಿತು.