ರಾಜ್ಯದ ಹಲವು ಪತ್ರಿಕೆಯ ವಿತರಕ ಇನ್ನಿಲ್ಲ
ತೀರ್ಥಹಳ್ಳಿ ತಾಲ್ಲೂಕಿನ ಹಿರಿಯ ಪತ್ರಕರ್ತ ಶೀನಪ್ಪ ಭಂಡಾರಿ (77) ಹೃದಯಾಘಾತದಿಂದ ಗುರುವಾರ ನಿಧನರಾದರು. ಕನ್ನಡಪ್ರಭ, ಉದಯವಾಣಿ, ಛಲಗಾರ ಪತ್ರಿಕೆ ಸೇರಿದಂತೆ ಅನೇಕ ಪತ್ರಿಕೆಗಳ ವರದಿಗಾರರಾಗಿ ಸುಮಾರು 40 ವರ್ಷಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ ರಾಜ್ಯದ ಅನೇಕ ಪತ್ರಿಕೆಗಳ ವಿತರಕರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು. ಪ್ರಜಾವಾಣಿ, ಉದಯವಾಣಿ, ವಿಜಯಕರ್ನಾಟಕ, ವಿಜಯವಾಣಿ, ಕನ್ನಡಪ್ರಭ, ಸುಧಾ, ಮಯೂರ, ಕರ್ಮವೀರ ಸೇರಿದಂತೆ ಅನೇಕ ಪತ್ರಿಕೆಗಳ ವಿತರಕರಾಗಿದ್ದರು. ಅಗ್ರಹಾರ ಹೋಬಳಿಯ ಸವಿತಾ ಸಮಾಜದ ಕಾರ್ಯದರ್ಶಿಯಾಗಿ 15 ವರ್ಷಗಳಿಗೂ ಹೆಚ್ಚು ಕಾಲ ಸಮಾಜದ ಸೇವೆ ಸಲ್ಲಿಸುತ್ತಿದ್ದರು.
ಅವರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಗುರುವಾರ ಕೋಣಂದೂರಿನಲ್ಲಿ ನಡೆಯಲಿದೆ. ಅವರಿಗೆ ಸದ್ಗತಿ ದೊರೆಯಲಿ ಎಂದು ನೆಲದಧ್ವನಿ ಬಳಗ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸುತ್ತದೆ.