ಗ್ಯಾರಂಟಿ ಯೋಜನೆ ಒಪ್ಪಿಕೊಂಡ ಆರಗ - ಅಮ್ರಪಾಲಿ ಲೇವಡಿ

2023ರ ವಿಧಾನಸಭೆ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಕೇವಲ ಓಟಿಗಾಗಿ ಜನರ ಮುಂದೆ ಕಾಂಗ್ರೆಸ್ ಗ್ಯಾರಂಟಿಯನ್ನು 420 ಕಾರ್ಡ್ ಎಂದು ಜರಿದು ಜನರ ಮುಂದೆ ಚಪ್ಪಾಳೆ ಗಿಟ್ಟಿಸಿಕೊಂಡಿದ್ದ ಆರಗ ಇಂದು ತಾವೇ ಮುಂದೆ ನಿಂತು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೆೇಶಕ್ಕೆ ತಮ್ಮ ದೊಡ್ಡ ಪೋಟೋ ಬಳಸಿ ಜನರನ್ನು ಸಮಾವೇಶಕ್ಕೆ ಕಳಿಸಿದ್ದು ಗಮನಿಸಿದರೆ ಇಂದು ಕಾಂಗ್ರೆಸ್ ಗ್ಯಾರಂಟಿ ಮಾಡಿರುವ ಜನಪರ ಯೋಜನೆಯನ್ನು ಇವತ್ತು ಒಪ್ಪಿಕೊಂಡಿದ್ದಾರೆ ಎನಿಸುತ್ತಿದೆ ಎಂದು ಕಾಂಗ್ರೆಸ್ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅಮ್ರಪಾಲಿ ಸುರೇಶ್ ಲೇವಡಿ ಮಾಡಿದ್ದಾರೆ.

ಇನ್ನಾದರೂ ಆರಗ ಕಾಂಗ್ರೆಸ್ ಜನಪರ ಯೋಜನೆ ಜನರನ್ನು ಹೇಗೆ ತಲುಪುತ್ತದೆ ಎಂಬುದನ್ನು ಅರಿತು ಅದರಿಂದ ಜನರಿಗಾಗುವ ಉಪಯೋಗಳನ್ನು ಅರ್ಥಮಾಡಿಕೊಂಡು ಮಾತಾಡಬೇಕು ಎಂದು ಅಮ್ರಪಾಲಿ ಸುರೇಶ್ ಮನವಿ ಮಾಡಿದ್ದು ಹಳೆಯ ಚುನಾವಣಾ ಸಂದರ್ಭದಲ್ಲಿ ಪ್ರಚಾರಕ್ಕಾಗಿ ಆರಗ ಜ್ಣಾನೇಂದ್ರ 420 ಕಾರ್ಡ್ ಎಂದಿರುವ ವೀಡಿಯೋ ಬಹಿರಂಗ ಪಡಿಸಿದ್ದಾರೆ.


ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post