ತೀರ್ಥಹಳ್ಳಿ ಟಿಹೆಚ್ಓ ಆಗಿದ್ದ ನಟರಾಜ್
ತೀರ್ಥಹಳ್ಳಿ ತಾಲ್ಲೂಕು ಜೆ.ಸಿ. ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ|| ನಟರಾಜ್ ಕೆ.ಎನ್. ಅವರನ್ನು ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಡಿಹೆಚ್ಓ) ಹುದ್ದೆಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಶಿವಮೊಗ್ಗ ಜಿಲ್ಲೆ ಡಿಹೆಚ್ಓ ಆಗಿದ್ದ ಡಾ|| ರಾಜೇಶ್ ಸುರಗಿಹಳ್ಳಿ ಸ್ಥಾನಕ್ಕೆ ಡಾ.ನಟರಾಜ್ ಕೆ.ಎನ್. ನೇಮಕಗೊಂಡಿದ್ದಾರೆ. ತೀರ್ಥಹಳ್ಳಿ ತಾಲ್ಲೂಕಿನ ಕೆಎಫ್ಡಿ ನಿರ್ವಹಣೆಯಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ್ದರು. ಮಂಡಗದ್ದೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯಾಗಿ, ಜೆಸಿ ಆಸ್ಪತ್ರೆ ವೈದ್ಯಾಧಿಕಾರಿಯಾಗಿ, ತಾಲ್ಲೂಕು ವೈದ್ಯಾಧಿಕಾರಿ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ.