ತೀರ್ಥಹಳ್ಳಿ ತಾಲೂಕಿನ ಉಂಟೂರು ಕಟ್ಟೆ ಸಮೀಪದ ಶಂಕರಮನೆ ನಿವಾಸಿ, ಪ್ರಗತಿಪರ ಕೃಷಿಕ ರಾಮಕೃಷ್ಣ ಗೌಡ (74) ಸೋಮವಾರ ಮುಂಜಾನೆ ಅವರ ಸ್ವಗೃಹದಲ್ಲಿ ನಿಧನರಾದರು.
ತಮ್ಮ ಸರಳ ಸಜ್ಜನಿಕೆಯಿಂದ ಆ ಭಾಗದಲ್ಲಿ ಜನಪ್ರಿಯರಾಗಿದ್ದ ಮೃತರು ಪತ್ನಿ, ಪುತ್ರ ಮಾಗರವಳ್ಳಿ ಸಹಕಾರಿ ಸಂಘ ಹಾಗೂ ತಾಲೂಕು ಯುವಜನ ಒಕ್ಕೂಟದ ಮಾಜಿ ಅಧ್ಯಕ್ಷ ಶಂಕರಮನೆ ಅರುಣ್, ಓರ್ವ ಪುತ್ರಿ ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಸಂಜೆ 4 ಗಂಟೆಗೆ ಮೃತರ ಅಂತಿಮ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.