ಈಜಲು ತೆರಳಿದ್ದ ಯುವಕರು ನೀರು ಪಾಲು
ರಂಜಾನ್ ಉಪವಾಸ ಮುಗಿಸಿ ಈಜಲು ತೆರಳಿದ್ದ ಮೂವರು ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ತುಂಗಾ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ.
ರಫನ್, ಇಯನ್, ಸಮ್ಮರ್ ಮೃತ ಬಾಲಕರು. ಸಂಜೆ ರಾಮ ಮಂಟಪದ ಪಕ್ಕ ಈ ಘಟನೆ ನಡೆದಿದೆ. ಮೂವರು ಬಾಲಕರ ಶವ ಪತ್ತೆಯಾಗಿದೆ. ಸತತವಾಗಿ ಒಂದು ಘಂಟೆಯಿಂದ ತುಂಗಾ ನದಿ ತೀರದಲ್ಲಿ ಅಗ್ನಿ ಶಾಮಕ ದಳ ಮತ್ತು ಪೊಲೀಸರು ಮೃತದೇಹ ಹೊರ ತೆಗೆದಿದ್ದಾರೆ. ಮೃತದೇಹವನ್ನು ಜೆ.ಸಿ. ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ.