ಸೋಮವಾರ ಬೃಹತ್
ಸಭೆಗೆ ಕ್ಷಣಗಣನೆ
ಕಾರ್ಯಕರ್ತರನ್ನು
ಆಹ್ವಾನಿಸಿದ ಬಿಜೆಪಿ ಮುಖಂಡ ಚಂದುವಳ್ಳಿ ಸೋಮಶೇಖರ್
ಶಿವಮೊಗ್ಗ ಲೋಕಸಭಾ
ಚುನಾವಣಾ ಕಾವು ದಿನೇ ದಿನೇ ಹೆಚ್ಚುತ್ತಿದೆ. ಸೋಮವಾರ ಬೆಳಿಗ್ಗೆ 10.30ಕ್ಕೆ ಭಾರತೀಯ ಜನತಾ ಪಕ್ಷದ
ಅಭ್ಯರ್ಥಿ ಬಿ.ವೈ. ರಾಘವೇಂದ್ರ ಪರ ಚುನಾವಣಾ ಪ್ರಚಾರ ನಡೆಸಲು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ
ಕೋಣಂದೂರಿಗೆ ಆಗಮಿಸುತ್ತಿದ್ದಾರೆ. ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯ ಗೆಲುವಿಗಾಗಿ ಶ್ರಮಿಸುತ್ತಿರುವ
ಅವರು ತೀರ್ಥಹಳ್ಳಿ ಕ್ಷೇತ್ರದಲ್ಲಿ ಮತಯಾಚನೆ ಮಾಡಲಿದ್ದಾರೆ. ಈ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.
ರಾಘವೇಂದ್ರ, ಶಾಸಕ ಆರಗ ಜ್ಞಾನೇಂದ್ರ ಪಾಲ್ಗೊಳ್ಳಲಿದ್ದಾರೆ.
ಬಿಜೆಪಿ ಮತ್ತು ಜೆಡಿಎಸ್
ಮುಖಂಡರು, ಕಾರ್ಯಕತ್ರರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮೈತ್ರಿ ಅಭ್ಯರ್ಥಿಯ ಗೆಲುವಿಗಾಗಿ ನಾವೆಲ್ಲರೂ
ಒಗ್ಗಟ್ಟಾಗಿ ಕೆಲಸ ಮಾಡೋಣ. ಸಭೆಯನ್ನು ಕಾರ್ಯಕರ್ತರು, ಅಭಿಮಾನಿಗಳು ಯಶಸ್ವಿಗೊಳಿಸಿಕೊಡಬೇಕೆಂದು ಬಿಜೆಪಿ
ಮುಖಂಡ ಚಂದುವಳ್ಳಿ ಸೋಮಶೇಖರ್ ಕರೆ ನೀಡಿದ್ದಾರೆ.