ಆಗುಂಬೆಯಲ್ಲಿ ಭೀಕರ ರಸ್ತೆ ಅಪಘಾತ

ಕ್ಯಾಂಟರ್‌ನಲ್ಲಿದ್ದ ಯುವಕ ಸ್ಥಳದಲ್ಲೇ ಸಾವು

ಆಗುಂಬೆಯ ಮಂದರತಿ ಗ್ರಾಂಡ್‌ ಹೋಟೆಲ್‌ ಮುಂಭಾಗ ಭಾರತ್‌ ಬೆಂಜ್‌ ಮತ್ತು ಕ್ಯಾಟರ್‌ ನಡುವೆ ಭಾರಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟ ಯವಕನನ್ನು ದೊಡ್ಡಮನೆಕೇರಿ ನಿವಾಸಿ ಸಲ್ಮಾನ್‌ (28) ಎಂದು ಗುರುತಿಸಲಾಗಿದೆ. ಹೆಬ್ರಿಯಿಂದ ತೀರ್ಥಹಳ್ಳಿಗೆ ಆಗಮಿಸುವ ಮಾರ್ಗ ಮಧ್ಯೆ ಈ ದುರಂತ ಸಂಭವಿಸಿದೆ. ಸನ್ಮಾನ್‌ ಕ್ಯಾಂಟರ್‌ನ ಎಡಭಾಗದಲ್ಲಿ ನಿದ್ದೆಗೆ ಜಾರಿದ್ದರು. ವಾಹನ ಚಲಾಯಿಸುವಾತ ನಿಲ್ಲಿಸಿದ್ದ ಭಾರತ್‌ ಬೆಂಜ್‌ ಲಾರಿಗೆ ಅಪ್ಪಳಿಸಿದ್ದಾರೆ.

ಸಲ್ಮಾನ್‌ ದೊಡ್ಡಮನೆಕೇರಿ ಮೊಟ್ಟೆ ವ್ಯಾಪಾರಿ ರಿಯಾಜ್‌ ಅವರ ಪುತ್ರ ಎಂದು ತಿಳಿದು ಬಂದಿದೆ.











ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post