ಕೈ ಕೊಟ್ಟ ಇವಿಎಂ ಮತಯಂತ್ರ

ಮತದಾನ ಪ್ರಕ್ರಿಯೆ 20 ನಿಮಿಷ ಸ್ಥಗಿತ
ಸಿಂದೂವಾಡಿ ಮತಕೇಂದ್ರದಲ್ಲಿ ಸಮಸ್ಯೆ

ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆ ಹೋಬಳಿಯ ಸಿಂಧೂವಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಮತಗಟ್ಟೆ ಸಂಖ್ಯೆ 128ರಲ್ಲಿ ಮತದಾನ ಪ್ರಕ್ರಿಯೆ ವೇಳೆ ತಾಂತ್ರಿಕ ದೋಷದಿಂದ ಮತಯಂತ್ರ ಕೈಕೊಟ್ಟಿದೆ.

ಬೆಳಗ್ಗಿನಿಂದ ಸುಮಾರು 28 ಮತ ಚಲಾವಣೆಯ ಬಳಿಕ ಮತಯಂತ್ರ ಹಾಳಾಗಿರುವುದು ಮತದಾರರಲ್ಲಿ ಕೆಲ ಸಮಯದ ಕಾಲ ಆತಂಕ ಸೃಷ್ಟಿಸಿತ್ತು. ಚಲಾವಣೆಯಾದ ಮತಗಳು ಕೂಡ ಏನಾದವೂ ಎಂಬ ಗೊಂದಲ ನಿರ್ಮಾಣವಾಗಿತ್ತು.

ತಕ್ಷಣ ಬೂತ್ ಸಿಬ್ಬಂದಿಗಳು ನೋಡೆಲ್ ಅಧಿಕಾರಿಗಳನ್ನು ಸಂಪರ್ಕಿಸಿದ್ದು ತಾಂತ್ರಿಕ ಸಿಬ್ಬಂದಿಗಳನ್ನು ಕರೆಸಿಕೊಂಡು ಇವಿಎಂ ಮಿಷನ್ ದುರಸ್ಥಿಗೊಳಿಸಿದ್ದಾರೆ. ಈ ಪ್ರಕ್ರಿಯೆ ಸುಮಾರು 20 ನಿಮಿಷ ನಡೆದಿದ್ದರಿಂದ ಸಿಂಧೂವಾಡಿ ಮತಕೇಂದ್ರದಲ್ಲಿ ಕೆಲ ಕಾಲ ಗೊಂದಲಕ್ಕೆ ಈಡಾಗಿತ್ತು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post