ಕಾರ್ಮಿಕರ ದಿನಾಚರಣೆ ಪ್ರಯುಕ್ತ ಸನ್ಮಾನ
ಜೂನ್ 4 ಅರ್ಜಿ ಸಲ್ಲಿಕೆಗೆ ಕೊನೆಯ ದಿನ
ತೀರ್ಥಹಳ್ಳಿ ತಾಲ್ಲೂಕಿನ ಕಟ್ಟಡ, ನಿರ್ಮಾಣ ಮತ್ತು ಎಲ್ಲಾ ರೀತಿಯ ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳಿಗಾಗಿ ಪೃಥ್ವಿಶ್ರಮ ಕಲ್ಲುಗಣಿ ಹಾಗೂ ನಿರ್ಮಾಣ ಶ್ರಮಿಕರ ಸರ್ವೋದಯ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ.
ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಶ್ರಮಿಕರ ಮಕ್ಕಳು ಅರ್ಜಿ ಸಲ್ಲಿಸಬಹುದು. ತೀರ್ಥಹಳ್ಳಿಯಲ್ಲಿ ಆಯೋಜಿಸುವ ಕಾರ್ಮಿಕರ ದಿನಾಚರಣೆಯಲ್ಲಿ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಸನ್ಮಾನಿಸಲಾಗುತ್ತದೆ. ಅರ್ಜಿ ಸಲ್ಲಿಕೆಗೆ ಯಾವುದೇ ನಿಯಮಗಳಿಲ್ಲ. ಉತ್ತಮ ಸಾಧನೆ ಮಾಡಿದ ಪ್ರತಿಯೊಬ್ಬ ಕಾರ್ಮಿಕರ ಮಕ್ಕಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರು ಜೂನ್ 4ರ ಒಳಗಾಗಿ ಸಲ್ಲಿಸಬೇಕು ಎಂದು ಸಂಘದ ಕಾರ್ಯದರ್ಶಿ ಮಂಜುನಾಥ್ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ಸಂಪರ್ಕಿಸಿ :
ಪೃಥ್ವಿಶ್ರಮ ಕಲ್ಲುಗಣಿ ಹಾಗೂ ನಿರ್ಮಾಣ ಶ್ರಮಿಕರ ಸರ್ವೋದಯ ಸಂಘ(ರಿ), ಮೇಲಿನಕುರುವಳ್ಳಿ (ಸಂಘದ ಕಚೇರಿ)
ಅಥವಾ
ತೀರ್ಥಹಳ್ಳಿ ಒನ್, ಈ ಸೇವಾ ಕೇಂದ್ರ
1ನೇ ಮಹಡಿ, ಎ.ಸಿ.ಸಿ ಬಿಲ್ಡಿಂಗ್
ಜೂನಿಯರ್ ಕಾಲೇಜ್ ರಸ್ತೆ, ತೀರ್ಥಹಳ್ಳಿ
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ