ಆದರ್ಶ ಎಂ.ಪಿ. ಅವರ ಅರಣ್ಯ ಸಂರಕ್ಷಣೆ ಗುರುತಿಸಿದ ಸರ್ಕಾರ
ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಆದರ್ಶ ಎಂ.ಪಿ. ಅವರಿಗೆ 2022ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಘೋಷಣೆಯಾಗಿದೆ.
ಇಲಾಖೆ ವ್ಯಾಪ್ತಿಯಲ್ಲಿ ಅರಣ್ಯ ಸಂರಕ್ಷಣೆಗಾಗಿ ಆರ್ ಎಫ್ಓ ಆದರ್ಶ ಎ.ಪಿ. ತೆಗೆದುಕೊಂಡ ಕ್ರಮಗಳನ್ನು ಪರಿಗಣಿಸಿ ಪ್ರಶಸ್ತಿಗೆ ಅಯ್ಕೆ ಮಾಡಲಾಗಿದೆ.
ಅರಣ್ಯ ಸಂರಕ್ಷಣೆ, ಅಕ್ರಮ ಕಡಿತಲೆ, ವನ್ಯಜೀವಿ ಸಂರಕ್ಷಣೆ, ಅರಣ್ಯ ಪ್ರದೇಶ ಒತ್ತುವರಿದಾರರಿಂದ ತೆರವು ಮುಂತಾದ ಗಣನೀಯ ಸಾಧನೆ ಮಾಡಿದವರಿಗೆ ಪ್ರತಿವರ್ಷ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
ಆದರ್ಶ ಕೋಣಂದೂರು ಸಮೀಪದ ಅರಳಸುರಳಿ ಗ್ರಾಮದವರು. ಅವರು ಮಂಡ್ಯ ಜಿಲ್ಲೆಯ ನಾಗಮಂಗಲ, ಹೊಸನಗರ, ನಗರ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.