ಮುಕೇಶ್ ಕಾಮತ್ ಅವರಿಗೆ ಗೌರವ

ಬಯೋಕಾನ್ ಕಂಪನಿಯ ಸಿ.ಎಫ್.ಓ. ಹುದ್ದೆ 
ತುಂಗಾ ಕಾಲೇಜು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀನಂದ ದಬ್ಬಣಗದ್ದೆ ನೇತೃತ್ವದಲ್ಲಿ ಸನ್ಮಾನ
ತೀರ್ಥಹಳ್ಳಿಯ ಪ್ರತಿಷ್ಠಿತ ತುಂಗಾ ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿ, ತೀರ್ಥಹಳ್ಳಿ ಮೂಲದ ಮುಕೇಶ್ ಕಾಮತ್ ದೇಶದ ಔಷಧ ಕ್ಷೇತ್ರದ ದಿಗ್ಗಜ ಸಂಸ್ಥೆ ಬಯೋಕಾನ್ ನೂತನ ಸಿ.ಎಫ್.ಓ ಹುದ್ದೆ ಅಲಂಕರಿಸಿದ್ದಾರೆ.
ತೀರ್ಥಹಳ್ಳಿ ಹಾಗೂ ತುಂಗಾ ಮಹಾವಿದ್ಯಾಲಯಕ್ಕೆ ಈ ಹುದ್ದೆ ಗೌರವ ತಂದಿದೆ. ಈಗಾಗಲೇ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಸೇರಿದಂತೆ ಅನೇಕ ಗಣ್ಯರು ಅವರಿಗೆ ಶುಭಾಶಯ ಸಲ್ಲಿಸಿದ್ದಾರೆ.
ಶನಿವಾರ ತುಂಗಾ ಕಾಲೇಜು ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಮುಕೇಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ವೇಳೆ ಮುಕೇಶ್ ಅವರು ಕಾಲೇಜಿನ ದಿನಗಳನ್ನು ನೆನಪಿಸಿಕೊಂಡರು.
ತುಂಗಾ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಶ್ರೀನಂದಾ ದಬ್ಬಣಗದ್ದೆ, ಕಾರ್ಯದರ್ಶಿ ಯುವರಾಜ್, ಉಪಾಧ್ಯಕ್ಷೆ ಅಕ್ಷತಾ, ಖಜಾಂಚಿ ಭರತ್ ಕೋಡ್ಲು, ಕಾರ್ಯಕಾರಿ ಸದಸ್ಯರಾದ ಪೂರ್ಣೇಶ್ ಕೆಳಕೆರೆ, ರಜನಿ ಜೋಗಿ, ನಮ್ಮೂರ್ ಎಕ್ಸ್ ಪ್ರೆಸ್ ಮುಖ್ಯಸ್ಥ ರಾಘವೇಂದ್ರ ಇದ್ದರು.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post