ಜೂನ್ 27 ರಿಂದಲೇ ಆದೇಶ ಕ್ರಮಕ್ಕೆ
ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ
ರಾಷ್ಟ್ರೀಯ ಹೆದ್ದಾರಿ 169ಎ ಮಾರ್ಗ ಮಧ್ಯೆಯ ಆಗುಂಬೆ ಘಾಟಿಯಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಹಿನ್ನಲೆಯಲ್ಲಿ ಜೂನ್ 27 ರಿಂದಲೇ ಆದೇಶ ಜಾರಿಗೆ ಬರುವಂತೆ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಸೂಚನೆ ಹೊರಡಿಸಿದ್ದಾರೆ.
2024 ಜೂನ್ 27 ರಿಂದ ಸೆಪ್ಟೆಂಬರ್ 15ರ ವರೆಗೆ ಭಾರಿ ವಾಹನಗಳಾದ ಜಲ್ಲಿ ಮತ್ತು ಸರಕು ಸಾಗಾಣೆ ತುಂಬಿದ ವಾಹನಗಳ ಸಂಚಾರಕ್ಕೆ ತಾತ್ಕಾಲಿಕ ನಿಷೇಧ ಹೇರಲಾಗಿದೆ. ಶಿವಮೊಗ್ಗ ಪೊಲೀಸ್ ಅಧೀಕ್ಷಕರು, ಪ್ರಾದೇಶಿಕ ಸಾರಿಗೆ ಅಧಿಕಾರಿ ಮತ್ತು ರಾಷ್ಟ್ರೀಯ ಹೆದ್ದಾರಿ 169 ಕಾರ್ಯಪಾಲಕ ಇಂಜಿನಿಯರ್ ಅವರ ಪತ್ರದ ಉಲ್ಲೇಖದಂತೆ ಆಗುಂಬೆ ಘಾಟಿ ಸಂಚಾರ ಸ್ಥಗಿತಗೊಳಿಸಲಾಗಿದೆ. ಬದಲಿ ಮಾರ್ಗವಾಗಿ ಮಾಸ್ತಿಕಟ್ಟೆ, ಕುಂದಾಪುರ ದಾರಿಯಲ್ಲಿ ಪ್ರಯಾಣಿಸುವಂತೆ ಸೂಚಿಸಿದ್ದಾರೆ.