ಮದ್ಯ ಸೇವಿಸಿ ಕಾರು ಚಾಲನೆ

ಆರೋಪಿಗೆ 15,000 ದಂಡ ವಿಧಿಸಿದ ನ್ಯಾಯಾಲಯ

ಕುಂದಾದ್ರಿ ಬೆಟ್ಟದಲ್ಲಿ ಮದ್ಯ ಸೇವಿಸಿ ಮೋಜು ಮಸ್ತಿ

ಮದ್ಯ ಸೇವಿಸಿ ಕಾರು ಚಾಲನೆ ಮಾಡುತ್ತಿದ್ದ ಪ್ರಕರಣ ಸಾಭೀತಾದ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯ ಕಟಪಾಡಿ ಪ್ರಸನ್ನ ಶೆಟ್ಟಿ (32) ಎಂಬುವವರಿಗೆ 15,000 ದಂಡ ವಿಧಿಸಿ ಶನಿವಾರ ತೀರ್ಥಹಳ್ಳಿಯ ಜೆಎಂಎಫ್‌ಸಿ ನ್ಯಾಯಾಲಯ ತೀರ್ಪು ನೀಡಿದೆ.

ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯ ಕುಂದಾದ್ರಿ ಬೆಟ್ಟದಲ್ಲಿ ಮದ್ಯ ಸೇವಿಸಿ ಮೋಜು ಮಸ್ತಿ ಮಾಡಿರುವುದಲ್ಲದೇ ಮತ್ತಿನಲ್ಲಿ ಕಾರು ಚಾಲನೆ ಮಾಡುತ್ತಿರುವುದು ಕಂಡು ಬಂದಿತ್ತು. ಪೊಲೀಸರು ಮದ್ಯ ಸೇವನೆ ತಪಾಸಣಾ ಯಂತ್ರದಲ್ಲಿ ಪರೀಶಿಸಿದಾಗ ಮದ್ಯ ಸೇವನೆ ದೃಢಪಟ್ಟಿತ್ತು. ನ್ಯಾಯಾಲಯಕ್ಕೆ ಪೊಲೀಸರು ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ದೋಷಾರೋಪ ಪಟ್ಟಿ ಆಲಿಸಿದ ನ್ಯಾಯಾಲಯ ಮದ್ಯ ಸೇವಿಸಿ ಕಾರು ಚಾಲನೆ ಮಾಡುತ್ತಿದ್ದ ಆರೋಪಿಗೆ 15,000 ದಂಡ ವಿಧಿಸಿದೆ.
ಕಾರ್ಯಚರಣೆಯಲ್ಲಿ ಪಿಎಸ್‌ಐ ರಂಗನಾಥ ಅಂತರಗಟ್ಟಿ, ಎಎಸ್‌ಐ ಉಮೇಶ್‌ ನಾಯ್ಕ್‌, ಸಿಬ್ಬಂದಿಗಳಾದ ಸುನೀಲ್‌ ಕನ್ನಂಗಿ, ಅನಿಲ್‌ ಯಡೂರು, ಗಣೇಶ್‌ ಆಗುಂಬೆ ಇದ್ದರು.


ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post