ಅಪಾಯ ಮಟ್ಟ ಮೀರಿ ಹರಿಯುತ್ತಿರುವ ತುಂಗೆ
ತೀರ್ಥಹಳ್ಳಿ, ಶೃಂಗೇರಿ ಭಾಗದಲ್ಲಿ ಕಳೆದ 24 ಗಂಟೆಯ ಅವಧಿಯಲ್ಲಿ ಧಾರಕಾರ ಮಳೆಯಾಗಿದ್ದು ತುಂಗಾನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ನದಿಯಲ್ಲಿ ಪ್ರವಾಹ ಹೆಚ್ಚಾಗಿದ್ದು ಪುರಾಣ ಪ್ರಸಿದ್ಧ ರಾಮೇಶ್ವರ ದೇವಸ್ಥಾನದ ಸಮೀಪ ಇರುವ ರಾಮಕೊಂಡ ಮುಳುಗಲು ಅರ್ಧ ಅಡಿ ಬಾಕಿ ಉಳಿದಿದೆ. ಇದೇ ರೀತಿ ಮಳೆ ಮುಂದುವರಿದರೆ ಮಂಗಳವಾರ ಸಂಜೆಯೊಳಗೆ ರಾಮಮಂಟಪ ತುಂಬಲಿದೆ. ತೀರ್ಥಹಳ್ಳಿಯ ಕೆಲಸ ಭಾಗದಲ್ಲಿ ನೆರೆಯ ವಾತಾವರಣ ಸೃಷ್ಟಿಯಾಗಲಿದೆ.
ತಡರಾತ್ರಿ ತೀರ್ಥಹಳ್ಳಿ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಿದೆ. ಗಾಳಿ 19 ಕಿ.ಲೋ. ವೇಗದಲ್ಲಿ ಚಲಿಸಲಿದೆ. ಮಂಗಳವಾರ ದಿನವಿಡಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.