ಮುನ್ನೂರು ಗ್ರಾಮದಲ್ಲಿ ರಸ್ತೆ ಕುಸಿತ

ಸಂಪರ್ಕ ಕಡಿತಗೊಳ್ಳುವ ಆತಂಕ
ಮನೆಗಳಿಗಿಲ್ಲ ಸಂಪರ್ಕ ರಸ್ತೆ - ಪಿಡಿಓ ನಾಟ್‌ ರೀಚಬಲ್

ತೀರ್ಥಹಳ್ಳಿ ತಾಲ್ಲೂಕಿನ ಮುನ್ನೂರು ಗ್ರಾಮದಲ್ಲಿ ಭಾರಿ ಪ್ರಮಾಣದಲ್ಲಿ ರಸ್ತೆ ಕುಸಿತಗೊಂಡಿದೆ. ಸಂಪರ್ಕ ರಸ್ತೆ ಸಂಪೂರ್ಣ ಕುಸಿಯುವ ಆತಂಕ ಎದುರಾಗಿದೆ. ಗ್ರಾಮದ ಸಂಪರ್ಕಕ್ಕೆ ಯಾವುದೇ ಪರ್ಯಾಯ ರಸ್ತೆ ಇಲ್ಲದ ಕಾರಣ ಪೂರ್ತಿ ಕುಸಿತ ಉಂಟಾದಲ್ಲಿ ಗ್ರಾಮವೇ ದ್ವೀಪದಂತಾಗುವ ಬೀತಿ ಎದುರಾಗಿದೆ.

ಗ್ರಾಮದಲ್ಲಿರುವ ಸುಮಾರು 26ಕ್ಕೂ ಹೆಚ್ಚು ಮನೆಗಳಿದ್ದು ಯಾವುದೇ ಅವಶ್ಯಕ ಸಾಮಾನು ಸರಂಜಾಮು ಸಾಗಿಸುವುದು ಅಸಾಧ್ಯವಾಗಿದ್ದು ಜೊತೆಗೆ ಶಾಲಾ, ಕಾಲೇಜು ಮಕ್ಕಳಿಗೆ ತೊಂದರೆ ಉಂಟಾಗಲಿದೆ. ಗ್ರಾಮಸ್ಥರು ಮೇಲಿನಕುರುವಳ್ಳಿ ಗ್ರಾಮ ಪಂಚಾಯಿತಿ ಅಧಿಕಾರಿಗಳನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದರು‌ ಪಿಡಿಓ ಮತ್ತು ಇತರೆ ಅಧಿಕಾರಿಗಳ ಫೋನ್‌ ಸ್ವಿಚ್‌ ಆಫ್‌ ಆಗಿದೆ. ತುರ್ತು ಕ್ರಮ ತೆಗೆದುಕೊಳ್ಳದಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಗುರಿಯಾಗಿದೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post