ಶೃಂಗೇರಿ-ಬಿದರಗೋಡು ಸಂಪರ್ಕ ಕಡಿತ
ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮಾಲತಿ ನದಿ ಪ್ರವಾಹ ಉಕ್ಕಿ ಹರಿಯುತ್ತಿದೆ. ಆಗುಂಬೆಯಿಂದ ಹರಿಯುವ ಮಾಲತಿ ನದಿಯಲ್ಲಿ ಭಾರಿ ಪ್ರಮಾಣದ ನೀರು ಶೇಖರಣೆಯಾಗುತ್ತಿದೆ.
ಗುಡ್ಡೇಕೇರಿಯಿಂದ ಹೊನ್ನೇತ್ತಾಳು ಮಾರ್ಗವಾಗಿ ಬಿದರಗೋಡು ಸಂಪರ್ಕಿಸುವ ರಸ್ತೆಯ ಮೇಲೆ ಪ್ರವಾಹ ಹರಿಯುತ್ತಿದೆ. ನಾಬಳ ಬಳಿ ಮಾಲತಿ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮವಾಗಿ ವಾಹನ ಸಂಚಾರವನ್ನು ಬದಲಿ ಮಾರ್ಗದಲ್ಲಿ ವ್ಯವಸ್ಥೆ ಮಾಡಲಾಗಿದೆ.
ಆಗುಂಬೆ-ಬಿದರಗೋಡು ಮಾರ್ಗವಾಗಿ ಸಂಪರ್ಕಿಸುವಂತೆ ಸ್ಥಳೀಯರು ಮನವಿ ಮಾಡಿಕೊಂಡಿದ್ದಾರೆ.