ಕಾಣೆಯಾಗಿದ್ದ ಯುವತಿ ಶವ ಆಗುಂಬೆ ಸಮೀಪ ಪತ್ತೆ
ತೀರ್ಥಹಳ್ಳಿ ತಾಲ್ಲೂಕಿನ
ನಾಲೂರು-ಕೊಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಮನೆ ಎಂಬ ಗ್ರಾಮದ ಕಾಡಿನಲ್ಲಿ ಯುವತಿಯ ಶವ ಶನಿವಾರ
ರಾತ್ರಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಯುವತಿಯನ್ನು ಜೂನ್ 30 ರಂದು ಕಾಣೆಯಾಗಿದ್ದ ಪೂಜಾ
ಎ.ಕೆ. (24) ಎಂದು ಗುರುತಿಸಲಾಗಿದೆ.
ನಾಲೂರಿನ ಮಣಿ ಎಂಬಾತ ಕೊಲೆ ಮಾಡಿ ಹೊಂಡಕ್ಕೆ ತಳ್ಳಿದ್ದೇನೆ ಎಂದು ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾನೆ ಎಂದು ಮೂಲಗಳ ಪ್ರಕಾರ ತಿಳಿದು ಬಂದಿದೆ. ಶನಿವಾರ ರಾತ್ರಿ ಆತನನ್ನು ಸ್ಥಳಕ್ಕೆ ಕರೆದೊಯ್ದು ಪೊಲೀಸರು ಸ್ಥಳ ಮಹಜರು ಮಾಡಿದ್ದಾರೆ. ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.