ಸೊಸೈಟಿ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಮುಖಭಂಗ
ತೀರ್ಥಹಳ್ಳಿ ತಾಲ್ಲೂಕಿನ ತೂದೂರು ವ್ಯವಸಾಯ ಸೇವಾ ಸಹಕಾರ ಸಂಘದ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ವೈ.ಡಿ. ದೇವದಾಸ್ ಸೋಮವಾರ ಆಯ್ಕೆಯಾಗಿದ್ದಾರೆ.
12 ನಿರ್ದೇಶಕ ಬಲದ ಸೊಸೈಟಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದ ಆರ್.ಆರ್.ಚಂದ್ರಪ್ಪ ನಿಧನರಾದ ಬಳಿಕ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದ ವನಿತಾ ನಾಗರಾಜ್ ಪ್ರಭಾರ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಾಂಗ್ರೆಸ್ ಬೆಂಬಲಿತ ವನಿತಾ ನಾಗರಾಜ್ ಅಧ್ಯಕ್ಷರಾಗಿ ಮುಂದುವರೆದಿದ್ದು ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಸೋಮವಾರ ಚುನಾವಣೆ ನಡೆದಿದೆ. ಬಿಜೆಪಿ ಬೆಂಬಲಿತ ವೈ.ಡಿ. ದೇವದಾಸ್ 7 ಮತಗಳಿಂದ ಜಯಶಾಲಿಯಾಗಿದ್ದಾರೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸುಬ್ರಹ್ಮಣ್ಯ 6 ಮತಗಳನ್ನು ಪಡೆದಿದ್ದಾರೆ. ಡಿಸಿಸಿ ಬ್ಯಾಂಕ್ ಪ್ರತಿನಿಧಿ ಒಂದು ಮತ ಚಲಾಯಿಸಿದ್ದಾರೆ.
ವೆಂಕಟಾಚಲಪತಿ ಚುನಾವಣಾಧಿಕಾರಿಯಾಗಿ
ಕರ್ತವ್ಯ ನಿರ್ವಹಿಸಿದ್ದಾರೆ.
ಈ ಸಂದರ್ಭದಲ್ಲಿ
ಶಾಸಕ ಆರಗ ಜ್ಞಾನೇಂದ್ರ, ಮುಖಂಡರಾದ ನಾಗರಾಜ ಶೆಟ್ಟಿ, ಮಧುರಾಜ ಹೆಗ್ಡೆ, ಚಂದವಳ್ಳಿ ಸೋಮಶೇಖರ್ ಇದ್ದರು.