ಮೈಸೂರು ಚಲೋ ಪಾದಯಾತ್ರೆಯಲ್ಲಿ ತೀರ್ಥಹಳ್ಳಿ ಯುವ ನಾಯಕರು
ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜೀನಾಮೆಗೆ ಆಗ್ರಹ
ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ಮೂಡಾ ಮತ್ತು ವಾಲ್ಮೀಕೀ ನಿಗಮದ ಹಣ ದುರುಪಯೋಗದ ಹಗರಣಗಳಿಗೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷಗಳ ವತಿಯಿಂದ ನಡೆಯುತ್ತಿರುವ ಮೈಸೂರು ಚಲೋ ಪಾದಯಾತ್ರೆಯಲ್ಲಿ ತೀರ್ಥಹಳ್ಳಿಯ ಯುವಮೋರ್ಚಾ ನಾಯಕರು ಭಾಗಿಯಾಗಿದ್ದಾರೆ. ಶಾಸಕ ಆರಗ ಜ್ಞಾನೇಂದ್ರ ಪ್ರತಿಭಟನೆಯಲ್ಲಿ ಹೆಜ್ಜೆ ಹಾಕಿದರು.
5ನೇ ದಿನವಾದ ಬುಧವಾರ ಶಿವಮೊಗ್ಗ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ, ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಪ್ರಶಾಂತ್ ಕುಕ್ಕೆ ನೇತೃತ್ವದಲ್ಲಿ ಯುವಮೋರ್ಚಾ ಸದಸ್ಯರು ಪರಮಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಯುವ ಮೋರ್ಚಾ ರಾಜ್ಯಾಧ್ಯಕ್ಷ ದೀರಜ್ ಮುನಿರಾಜು, ಮಾಜಿ ಸಚಿವರಾದ ಅಶ್ವಥ್ ನಾರಾಯಣ್, ಹರತಾಳು ಹಾಲಪ್ಪ, ಮಾಜಿ ಸಂಸದ ಮುನಿಸ್ವಾಮಿ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.
ಶಿವಮೊಗ್ಗ ಯುವ ಮೋರ್ಚಾ ಕಾರ್ಯದರ್ಶಿ, ಗ್ರಾಮ ಪಂಚಾಯಿತಿ ಸದಸ್ಯ ಯಶಸ್ವಿ ಕಡ್ತೂರು, ಮುಳಬಾಗಿಲು ಗ್ರಾಮ ಪಂಚಾಯಿತಿ ಸದಸ್ಯ ಅಭಿಲಾಶ್ ಬಾಳೆಕೊಪ್ಪ, ಬಸವಾನಿ ಶ್ರೀಕಾಂತ್, ಕೊಂಡ್ಲೂರು ಅಭಿನಯರಾಜ್, ಸುದರ್ಶನ್ ಬಾಳೆಕೊಪ್ಪ, ಅಭಿಲಾಷ್ ಹೊಸನಗರ, ದಿನೇಶ್ ಕುಂಟಿಗೆ , ನಿತಿನ್ ಯಡೂರು ಇದ್ದರು.