ಪಿಕಪ್ - ಬೈಕ್ ಸವಾರ ಸೇರಿ ಇಬ್ಬರ ಸಾವು
ಪಿಕಪ್ ಚಾಲಕ ಸ್ಥಳದಿಂದ ಪರಾರಿ
ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಸಮೀಪದ ಬಿದರಗೋಡು ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಗಸರಕೋಣೆ ಶರತ್ (35) ಮತ್ತು ಪಿಕಪ್ ವಾಹನದಲ್ಲಿದ್ದ ಕೇರಳ ಮೂಲದ ಮತ್ತೋರ್ವ ಯುವಕ ಸ್ಥಳದಲ್ಲೆ ಮೃತಪಟ್ಟಿದ್ದು ಮೃತನ ಹೆಸರು ಪತ್ತೆಯಾಗಿಲ್ಲ. ಪಿಕಪ್ ವಾಹನ ಓಡಿಸುತ್ತಿದ್ದ ಬಾವಿ ಕೆಲಸ ಮಾಡುವ ಸಂತೋಷ್ ಎಂಬಾತ ಸ್ಥಳದಿಂದ ಪರಾರಿಯಾಗಿದ್ದಾರೆ.
ಮಧ್ಯಾಹ್ನ 1.15ಕ್ಕೆ ಬಿದರಗೋಡು ಮಾರ್ಗವಾಗಿ ಚಲಿಸುತ್ತಿದ್ದ ಬೈಕ್ ಏಕಾಏಕಿ ಪಿಕಪ್ ವಾಹನಕ್ಕೆ ಅಪ್ಪಳಿಸಿದೆ. ಅಪ್ಪಳಿಸಿದ ಹೊಡೆತಕ್ಕೆ ಚಾಲಕ ಶರತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರು ಇದ್ದ ಪಿಕಪ್ ವಾಹನ ಚಲಿಸುತ್ತಿರುವ ವೇಗವನ್ನು ಕಡಿತಗೊಳಿಸಲು ಮುಂದಾಗಿದ್ದು ಗುಂಡಿಗೆ ಬಿದ್ದು ವಾಹನದಲ್ಲಿದ್ದ ಕೇರಳ ಮೂಲದ ಯುವಕ ಮೃತಪಟ್ಟಿದ್ದಾನೆ. ಇನ್ನೋರ್ವನಿಗೆ ಗಂಭೀರ ಗಾಯಗೊಂಡಿದ್ದಾನೆ
ಆಗುಂಬೆ ಪೊಲೀಸರು ಸ್ಥಳಕ್ಕೆ ತೆರಳಿ ಮಹಜರು ನಡೆಸಿದ್ದಾರೆ. ಆಗುಂಬೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.