ಆಗುಂಬೆ ಬಿದರಗೋಡು ಸಮೀಪ ಬೀಕರ ಅಪಘಾತ

ಪಿಕಪ್ - ಬೈಕ್ ಸವಾರ ಸೇರಿ ಇಬ್ಬರ ಸಾವು
ಪಿಕಪ್ ಚಾಲಕ ಸ್ಥಳದಿಂದ ಪರಾರಿ


ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಸಮೀಪದ ಬಿದರಗೋಡು ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಗಸರಕೋಣೆ ಶರತ್ (35) ಮತ್ತು ಪಿಕಪ್ ವಾಹನದಲ್ಲಿದ್ದ ಕೇರಳ ಮೂಲದ ಮತ್ತೋರ್ವ ಯುವಕ ಸ್ಥಳದಲ್ಲೆ ಮೃತಪಟ್ಟಿದ್ದು ಮೃತನ ಹೆಸರು ಪತ್ತೆಯಾಗಿಲ್ಲ. ಪಿಕಪ್ ವಾಹನ ಓಡಿಸುತ್ತಿದ್ದ ಬಾವಿ ಕೆಲಸ ಮಾಡುವ ಸಂತೋಷ್ ಎಂಬಾತ ಸ್ಥಳದಿಂದ ಪರಾರಿಯಾಗಿದ್ದಾರೆ.

ಮಧ್ಯಾಹ್ನ 1.15ಕ್ಕೆ ಬಿದರಗೋಡು ಮಾರ್ಗವಾಗಿ ಚಲಿಸುತ್ತಿದ್ದ ಬೈಕ್ ಏಕಾಏಕಿ ಪಿಕಪ್ ವಾಹನಕ್ಕೆ ಅಪ್ಪಳಿಸಿದೆ. ಅಪ್ಪಳಿಸಿದ ಹೊಡೆತಕ್ಕೆ ಚಾಲಕ ಶರತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರು ಇದ್ದ ಪಿಕಪ್ ವಾಹನ ಚಲಿಸುತ್ತಿರುವ ವೇಗವನ್ನು ಕಡಿತಗೊಳಿಸಲು ಮುಂದಾಗಿದ್ದು ಗುಂಡಿಗೆ ಬಿದ್ದು ವಾಹನದಲ್ಲಿದ್ದ ಕೇರಳ ಮೂಲದ ಯುವಕ ಮೃತಪಟ್ಟಿದ್ದಾನೆ. ಇನ್ನೋರ್ವನಿಗೆ ಗಂಭೀರ ಗಾಯಗೊಂಡಿದ್ದಾನೆ
ಆಗುಂಬೆ ಪೊಲೀಸರು ಸ್ಥಳಕ್ಕೆ ತೆರಳಿ ಮಹಜರು ನಡೆಸಿದ್ದಾರೆ. ಆಗುಂಬೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post