ಗುಡ್ಡೆಕೇರಿ ಸರ್ಕಾರಿ ಪ್ರೌಢಶಾಲೆಗೆ ಮತ್ತೊಂದು ಗರಿ
ತೀರ್ಥಹಳ್ಳಿ ತಾಲ್ಲೂಕಿನ ಹೊಸೂರು- ಗುಡ್ಡೆಕೇರಿ ಸರ್ಕಾರಿ ಪ್ರೌಢಶಾಲೆಯ ಸಮಾಜ ವಿಜ್ಞಾನ ಶಿಕ್ಷಕ ವೀರೇಶ್ ಟಿ. ಅವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.
ಪ್ರೌಢಶಾಲಾ ವಿಭಾಗದಿಂದ ಪ್ರಶಸ್ತಿಗೆ ಆಯ್ಕೆಯಾಗಿರುವ ವೀರೇಶ್ ಟಿ ಅವರಿಗೆ ಸೆಪ್ಟೆಂಬರ್ 12 ರಂದು ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಪ್ರಶಸ್ತಿ 25,000 ನಗದು ಒಳಗೊಂಡಿದೆ. ರಾಜ್ಯದಲ್ಲಿ ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರು ಆಯ್ಕೆಯಾಗಿದ್ದು ಅದರಲ್ಲಿ ವೀರೇಶ್ ಕೂಡ ಒಬ್ಬರಾಗಿದ್ದಾರೆ.
ಕರ್ನಾಟಕ ರಾಜ್ಯಪಾಲರ ಆದೇಶನುದಾರ ಮಂಗಳವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮಹಾಂತಯ್ಯ ಎಸ್ ಹೊಸಮಠ ಅಧಿಸೂಚನೆ ಹೊರಡಿಸಿದ್ದಾರೆ.